ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಕ್ಕಿ ಕರ್ನಾಟಕ ಮೂಲಕ ನಾಗಸಾಧು ಸಾವನ್ನಪ್ಪಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಚಿತ್ರದುರ್ಗದ ಬಂಜಾರ ಗುರು ಪೀಠದಲ್ಲಿ ಕಳೆದ ಏಳು ವರ್ಷಗಳಿಂದ ನೆಲೆಸಿದ್ದ ನಾಗಸಾಧು ರಾಜನಾಥ ಮಹಾರಾಜ್ ಕಾಳ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಕಳೆದ ಒಂದುವಾರದ ಹಿಂದೆಯಷ್ಟೇ ಕುಂಭಮೇಳಕ್ಕೆ ತೆರಳಿದ್ದ ರಾಜನಾಥ್ ಮಹಾರಾಜ್ ಬಂಜಾರ ಗುರುಪೀಠದ ಪೀಠಾಧಿಪತಿ ಸರ್ಧಾರ್ ಸೇವಾಲಾಲ್ ಶ್ರೀಗಳ ಒಡನಾಡಿಯಾಗಿದ್ದರು.
ಇವರ ಸಾವಿನ ಬಗ್ಗೆ ಉತ್ತರ ಪ್ರದೇಶದ ಪೊಲೀಸರು, ಕರ್ನಾಟಕ ಪೊಲೀಸರಿಗೆ ಮಾಹಿತಿ ನೀಡಿದ್ದು, ರಾಜನಾಥ್ ಸಾವಿನ ಖಚಿತ ಪಡಿಸಿದ್ದಾರೆ. ಈ ಸಂಬಂಧ ಚಿತ್ರದುರ್ಗದಲ್ಲಿ ಲಂಬಾಣಿ ಗುರುಪೀಠದ ಸರ್ಧಾರ್ ಸೇವಾಲಾಲ್ ಸ್ವಾಮೀಜಿ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ.
ಚಿತ್ರದುರ್ಗಕ್ಕೆ ರಾಜನಾಥ್ ಮಹಾರಾಜರ ಪಾರ್ಥಿವ ಶರೀರವನ್ನು ತಲುಪಿಸುವಂತೆ ಉತ್ತರ ಪ್ರದೇಶ ಸರ್ಕಾರ ಹಾಗೂ ಕರ್ನಾಟಕ ಸರ್ಕಾರಕ್ಕೆ ಸರ್ಧಾರ ಸೇವಾಲಾಲ್ ಸ್ವಾಮೀಜಿ ಮನವಿ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಿಂದ ಸಾವು ನೋವಾಗದಂತೆ ಕ್ರಮ ವಹಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಪ್ರಯಾಗ್ ರಾಜ್ನಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


