ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ನ ಹೈಲೈಟ್ಸ್ ಈ ಕೆಳಕಂಡಂತಿವೆ.
Advertisement
- ಕೈಗಾರಿಕೆಗಳನ್ನು ಉತ್ತೇಜಿಸಲು ರಾಷ್ಟ್ರೀಯ ಉತ್ಪಾದನಾ ಮಿಷನ್
- ನಗರ ಬಡವರಿಗೆ 30 ಸಾವಿರ ರೂ ಮಿತಿಯೊಂದಿಗೆ ಯುಪಿಐ ಲಿಂಕ್ಡ್ ಕ್ರೆಡಿಟ್ ಕಾರ್ಡ್ಗಳು
- ಮುಂದಿನ ಐದು ವರ್ಷಗಳಲ್ಲಿ ದೇಶಾದ್ಯಂತೆ 75 ಸಾವಿರ ಹೊಸ ವೈದ್ಯಕೀಯ ಸೀಟುಗಳು
- ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಡೇ ಕೇರ್ ಕ್ಯಾನ್ಸರ್ ಕೇಂದ್ರಗಳು
- ಜಲಜೀವನ್ ಮಿಷನ್ ಅಡಿಯಲ್ಲಿ 15 ಕೋಟಿ ಜನರಿಗೆ ಸುರಕ್ಷಿತ ಕುಡಿಯುವ ನೀರು
- ಪ್ರಧಾನ ಮಂತ್ರಿ ಆರೋಗ್ಯ ಯೋಜನೆಯಡಿ ಗಿಗ್ ಕಾರ್ಮಿಕರಿಗೆ ಆರೋಗ್ಯ ಕಾರ್ಡುಗಳು
- 8 ಕೋಟಿ ಮಕ್ಕಳು ಮತ್ತು ಒಂದು ಕೋಟಿ ಗರ್ಭಿಣಿಯರಿಗೆ ಅಂಗನವಾಡಿ 2.0
- ದೇಶಾದ್ಯಂತ 50 ಸಾವಿರ ಶಾಲೆಗಳಲ್ಲಿ ಅಟಲ್ ಟಿಂಕರಿಂಗ್ ಲ್ಯಾಬ್ಗಳ ಸ್ಥಾಪನೆ
- ದ್ವಿದಳ ಧಾನ್ಯಗಳ ಉತ್ಪಾದನೆಗೆ ಸ್ವಾವಲಂನೆ ಯೋಜನೆ
- ಬಿಹಾರದಲ್ಲಿ ಮುಖಾನಾ ಮಂಡಳಿ ಸ್ಥಾಪನೆ
- ಕೇಂದ್ರದಿಂದಲೇ ದ್ವಿದಳ ಧಾನ್ಯಗಳ ಖರೀದಿ
- ಹಣ್ಣು ಹಾಗೂ ತರಕಾರಿಗಳ ಉತ್ಪಾದನೆಗೆ ಹೊಸ ಯೋಜನೆ
- ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದ್ದು, 7.7 ಕೋಟಿ ರೈತರಿಗೆ ಅನುಕೂಲವಾಗಲಿದೆ.
- ಪ್ರಧಾನಮಂತ್ರಿ ಧನ್ ಧಾನ್ಯ ಯೋಜನೆ ಕಾರ್ಯಕ್ರಮ ಘೋಷಣೆ
- ದೇಶದ ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ತೇಜನ
- ಎಂಎಸ್ಎಂಇಗಳಿಗೆ ಸಾಲಗಳು 5 ಕೋಟಿಯಿಂದ 10 ಕೋಟಿಗೆ ಏರಿಕೆ
- ಹೆಚ್ಚಿನ ಇಳುವರಿ ನೀಡುವ ಪ್ರಭೇದಗಳಿಗೆ ವಿಶೇಷ ರಾಷ್ಟ್ರೀಯ ಮಿಷನ್
- ರಾಜ್ಯಗಳಿಗೆ 1.5 ಲಕ್ಷ ಕೋಟಿ ರೂಗಳ ಸಾಲಗಳು
- 50 ವರ್ಷಗಳವರೆಗೆ ಬಡ್ಡಿರಹಿತ ಸಾಲಗಳು
- ಗಿರ್ ಕಾರ್ಮಿಕರಿಗೆ ಗುರುತಿನ ಚೀಟಿಗಳು
- 27 ವಲಯಗಳಲ್ಲಿನ ನವೋದ್ಯಮಗಳಿಗೆ ಸಾಲಕ್ಕಾಗಿ ವಿಶೇಷ ಕ್ರಮ
- ಹಿರಿಯ ನಾಗರಿಕರಿಗೆ TDS ವಿನಾಯಿತಿ ರೂ 50 ಸಾವಿರದಿಂದ ರೂ 1 ಲಕ್ಷಕ್ಕೆ ಏರಿಕೆ
- ವಿಮಾ ವಲಯದಲ್ಲಿ ಶೇ.100ರಷ್ಟು FDIಗೆ ಅವಕಾಶ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


