Monday, July 6, 2026
spot_img
More
    spot_img
    HomeLatest newsUnion Budget 2025: ಕೇಂದ್ರ ನಮಗೆ ಏನೂ ಕೊಟ್ಟಿಲ್ಲ ಎನ್ನುವುದು ಸುಳ್ಳು: ವಿಪಕ್ಷ ನಾಯಕ ಆರ್.‌ಅಶೋಕ್‌...

    Union Budget 2025: ಕೇಂದ್ರ ನಮಗೆ ಏನೂ ಕೊಟ್ಟಿಲ್ಲ ಎನ್ನುವುದು ಸುಳ್ಳು: ವಿಪಕ್ಷ ನಾಯಕ ಆರ್.‌ಅಶೋಕ್‌ ಸಂತಸ

    ಬೆಂಗಳೂರು: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು ಮಂಡಿಸಿದ ಕೇಂದ್ರ ಬಜೆಟ್‌ ಬಗ್ಗೆ ವಿಪಕ್ಷ ನಾಯಕ ಆರ್.‌ಅಶೋಕ್‌ ಸಂತಸ ವ್ಯಕ್ತಪಡಿಸಿದ್ದಾರೆ.

    Advertisement

    ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಕರ್ನಾಟಕದ ಎಲ್ಲಾ ಶ್ರಮಶೀಲ ಮಧ್ಯಮ ವರ್ಗದ ಪರವಾಗಿ, ಹೊಸ ತೆರಿಗೆ ವ್ಯವಸ್ಥೆಯಡಿಯಲ್ಲಿ ₹12 ಲಕ್ಷ ಆದಾಯದವರೆಗೆ “ಶೂನ್ಯ ಆದಾಯ ತೆರಿಗೆ” ಘೋಷಿಸಿದ್ದಕ್ಕಾಗಿ ನಮ್ಮ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಗೌರವಾನ್ವಿತ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್‌ ಜಿ ಅವರಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ.

    ನಮ್ಮ ಬಿಜೆಪಿ ನೇತೃತ್ವದ NDA ಸರ್ಕಾರದ ಈ ನಿರ್ಧಾರವು ಕೋಟ್ಯಂತರ ಮಧ್ಯಮ ವರ್ಗದ ಸಂಬಳ ಪಡೆಯುವ ಉದ್ಯೋಗಿಗಳ ಉಳಿತಾಯವನ್ನು ಹೆಚ್ಚಿಸುತ್ತದೆ ಮತ್ತು ಅವರ ಕುಟುಂಬಗಳಿಗೆ ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ.

    ಬಡ್ಡಿಯ ಮೇಲಿನ TDS ವಿನಾಯಿತಿಗಳನ್ನು ₹50,000 ರಿಂದ ₹1,00,000 ಕ್ಕೆ ಹೆಚ್ಚಿಸುವುದರಿಂದ ಹಿರಿಯ ನಾಗರಿಕರು ಸಹ ಹೆಚ್ಚಿನ ಪ್ರಯೋಜನವನ್ನು ಪಡೆಯುತ್ತಾರೆ.

    ಈ ಮೂಲಕ ಕೇಂದ್ರದ ಬಜೆಟ್‌ನ್ನು ರಾಜ್ಯ ಬಿಜೆಪಿ ನಾಯಕರು ಸಮರ್ಥನೆ ಮಾಡಿಕೊಂಡಿದ್ದು, ಕೇಂದ್ರ ಬಜೆಟ್‌ ಬಗ್ಗೆ ಸಂತಸ ವ್ಯಕ್ತಪಡಿಸುತ್ತಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    ಬೆಂಗಳೂರು: ಡೇ ಕೇರ್‌ನಲ್ಲಿ ಮಕ್ಕಳಿಗೆ ಹಿಂಸೆ, ಐವರು ಮಹಿಳೆಯರ ವಿರುದ್ಧ ಎಫ್‌ಐಆರ್

    ಕ್ಯಾಪ್‌ಜೆಮಿನಿ ಕ್ಯಾಂಪಸ್‌ನ ಡೇ ಕೇರ್‌ನಲ್ಲಿ ಪುಟ್ಟ ಮಕ್ಕಳಿಗೆ ಹಿಂಸೆ ನೀಡಿದ ಆರೋಪದ ವಿಡಿಯೊ ವೈರಲ್; ಐವರು ಮಹಿಳಾ ಆರೈಕೆದಾರರ ವಿರುದ್ಧ ಪ್ರಕರಣ ದಾಖಲು.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading