Wednesday, September 2, 2026
spot_img
More
    spot_img
    HomeLatest newsಬೆಂಗಳೂರು–ಬೀದರ್ ನಡುವೆ ಹೆಚ್ಚುವರಿ ರೈಲು, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

    ಬೆಂಗಳೂರು–ಬೀದರ್ ನಡುವೆ ಹೆಚ್ಚುವರಿ ರೈಲು, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ

    ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆ (ಆಗಸ್ಟ್ 15) ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ ರೈಲ್ವೆ ವಿಶೇಷ ವ್ಯವಸ್ಥೆ ಮಾಡಿದೆ. ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲತೆ ಒದಗಿಸಲು, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು (SMVT Bengaluru) ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ಒಂದೊಂದು ಟ್ರಿಪ್‌ ವಿಶೇಷ ಎಕ್ಸ್‌ಪ್ರೆಸ್ ರೈಲು ವ್ಯವಸ್ಥೆ ಮಾಡಲಾಗಿದೆ.ಸ್ವಾತಂತ್ರ್ಯ ದಿನಾಚರಣೆ ಈ ಬಾರಿ ಶುಕ್ರವಾರದಂದು (ಆಗಸ್ಟ್ 15) ಬರುತ್ತಿರುವುದರಿಂದ, ಮುಂಜಾನೆ ದಿನಗಳಲ್ಲಿ ಜನ ಸಂಚಾರ ಹೆಚ್ಚಿರಬಹುದೆಂಬ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ರೈಲು ಸಂಚಾರವನ್ನು ಸುಗಮಗೊಳಿಸಲು ಈ ವಿಶೇಷ ರೈಲು ಪ್ರಯಾಣಿಕರಿಗೆ ಬಹುಮುಖ್ಯ ಅನುಕೂಲವಾಗಲಿದೆ.ಈ ರೀತಿಯ ವಿಶೇಷ ರೈಲು ಸೇವೆಗಳು ಸಾರ್ವಜನಿಕರಿಗೆ ಅತ್ಯಗತ್ಯ ಸಂದರ್ಭದಲ್ಲಿ ಸಮಯದಲ್ಲಿ ತಲುಪುವಂತಾಗಿದ್ದು, ಪ್ರವಾಸಿಗರು ಹಾಗೂ ಗ್ರಾಮೀಣ ಪ್ರದೇಶಗಳಿಗೆ ತೆರಳುವವರು ಇದರ ಲಾಭ ಪಡೆಯಬಹುದು.

    Advertisement

    ಎಸ್‌ಎಂವಿಟಿ ಬೆಂಗಳೂರು ಬೀದರ್ ವಿಶೇಷ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 06519) 2025ರ ಆಗಸ್ಟ್ 14, ಗುರುವಾರ ದಿನ ರಾತ್ರಿ 9:15ಕ್ಕೆ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್‌ಎಂವಿಟಿ) ಬೆಂಗಳೂರು ನಿಲ್ದಾಣದಿಂದ ಹೊರಟು, ಮರುದಿನ ಬೆಳಗ್ಗೆ 11:30ಕ್ಕೆ ಬೀದರ್‌ಗೆ ತಲುಪಲಿದೆ.ಮರಳಿ , ಬೀದರ್ ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (ಸಂಖ್ಯೆ 06520) 2025ರ ಆಗಸ್ಟ್ 15, ಶುಕ್ರವಾರ ಮಧ್ಯಾಹ್ನ 2:30ಕ್ಕೆ ಬೀದರ್‌ನಿಂದ ಹೊರಟು, ಮರುದಿನ ಬೆಳಗಿನ ಜಾವ 4:30ಕ್ಕೆ ಎಸ್‌ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ತಲುಪಲಿದೆ.

    ಏಲ್ಲೆಲ್ಲಿ ನಿಲುಗಡೆ?


    ಮಾರ್ಗದಲ್ಲಿ, ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು ಟು ಬೀದರ್ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ, ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ರೈಲು ಸಂಖ್ಯೆ 06520 ಇದೇ ನಿಲ್ದಾಣಗಳಲ್ಲಿ ಹಿಮ್ಮುಖ ಕ್ರಮದಲ್ಲಿ ನಿಲ್ಲಲಿದೆ.ಈ ವಿಶೇಷ ರೈಲು 20 ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿಗಳು ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ.

    ಇಂದಿನಿಂದ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹33.50ರಷ್ಟು ಕಡಿತ!

    ಕೃಷಿ ಎಐ ಕನ್ನಡ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading