ನಾಪೋಕ್ಲು: ಕೊಡಗು ಜಿಲ್ಲೆಯ ಅತ್ಯಂತ ಎತ್ತರದ ಬೆಟ್ಟ ಭಾಗಮಂಡಲ ವಲಯದ ಕಕಬೆ ಉಪವಲಯ ವ್ಯಾಪ್ತಿಯ ತಡಿಯಂಡಮೋಳ್ ಬೆಟ್ಟಕ್ಕೆ ತಾತ್ಕಾಲಿಕವಾಗಿ ಮುಂದಿನ ಆದೇಶದವರೆಗೆ ಚಾರಣ ನಿರ್ಬಂಧಿಸಲಾಗಿದೆ.
ಕೆಲವು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮಾನವ ಪ್ರಾಣ ಹಾನಿ, ಜಾನುವಾರುಗಳ ಪ್ರಾಣಹಾನಿ, ಮೂಲಭೂತ ಸೌಕರ್ಯಗಳಿಗೆ ಹಾನಿಯಾಗುವಂತಹ ಘಟನೆಗಳು ವರದಿಯಾಗಿರುವ
ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿರುಸಿನ ಮಳೆಯಾಗುತ್ತಿರುವುದರಿಂದ ಮರದ ರೆಂಬೆಗಳು ರಸ್ತೆಗೆ ಮುರಿದು ಬಿದ್ದು ಪ್ರಾಣಾಪಾಯವಾಗುವ ಸಂಭವ ಇದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಮುಂಗಾರು ಅವಧಿ ಮುಕ್ತಾಯಗೊಳ್ಳುವವರೆಗೆ ಅರಣ್ಯ ವ್ಯಾಪ್ತಿಯಲ್ಲಿ ಚಾರಣವನ್ನು ನಿಷೇಧಿಸಲಾಗಿದೆ.
ಇಂದಿನಿಂದ ವಾಣಿಜ್ಯ LPG ಸಿಲಿಂಡರ್ ಬೆಲೆಯಲ್ಲಿ ₹33.50ರಷ್ಟು ಕಡಿತ!
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


