Monday, August 31, 2026
spot_img
More
    spot_img
    HomeLatest newsಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಮುಸ್ಲಿಮರ ದರ್ಗಾಗಳನ್ನು ಮುಟ್ಟಲು ಧೈರ್ಯವಿಲ್ಲ ಎಂದ ಅಶೋಕ್‌

    ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಮುಸ್ಲಿಮರ ದರ್ಗಾಗಳನ್ನು ಮುಟ್ಟಲು ಧೈರ್ಯವಿಲ್ಲ ಎಂದ ಅಶೋಕ್‌

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹಿಂದೂಗಳಿಗೆ ರಾಹುಕೇತುಗಳಂತೆ ಕಾಡುತ್ತಿದ್ದಾರೆ. ಇವರಿಗೆ ಮುಸ್ಲಿಮರ ದರ್ಗಾಗಳನ್ನು ಮುಟ್ಟಲು ಧೈರ್ಯವಿಲ್ಲ, ಹಿಂದೂ ದೇವಸ್ಥಾನಗಳ ಮೇಲೆಯೇ ಕಣ್ಣು ಎಂದು ಬಿಜೆಪಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಕಿಡಿಕಾರಿದ್ದಾರೆ.

    Advertisement

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಷಡ್ಯಂತ್ರ ಮಾಡಿ ಎಸ್‍ಐಟಿ ತನಿಖೆಗೆ ಕೊಟ್ಟರು. ಈಗ ಚಾಮುಂಡೇಶ್ವರಿ ಬೆಟ್ಟಕ್ಕೆ ಕಣ್ಣು ಹಾಕಿದ್ದಾರೆ. ಈ ನಿಟ್ಟಿನಲ್ಲಿ ಧಮಸ್ಥಳ ಚಲೋ ಮಾದರಿಯಲ್ಲೇ ಚಾಮುಂಡೇಶ್ವರಿ ಚಲೋ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

    ನಾವು ಧರ್ಮಸ್ಥಳ ಉಳಿಸಲು ಬಂದಿz್ದÉೀವೆ. ಈ ಕಾರ್ಯಕ್ರಮದ ಮೂಲಕ ಹಿಂದು ಧರ್ಮ ಉಳಿಸುವ ಕೆಲಸ ಮಾಡುತ್ತೇವೆ. ಹಿಂದು ದೇವಸ್ಥಾನಗಳನ್ನ ಮುಟ್ಟಿದರೆ ಹುಷಾರ್ ಎಂಬ ಸಂದೇಶ ರವಾನೆ ಮಾಡುತ್ತೇವೆ ಎಂದು ಎಚ್ಚರಿಕೆ ಕೊಟ್ಟರು.

    ಶಾಸಕ ಮುನಿರತ್ನ ಮಾತನಾಡಿ ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ಆಗಿ ಪತ್ರ ಬರೆದು ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡರು, ಬೋವಿ ನಿಗಮದಲ್ಲೂ ಒಬ್ಬ ಅಧಿಕಾರಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಆಗ ಈ ರಾಜ್ಯ ಸರ್ಕಾರ ಎಚ್ಚೇತ್ತುಕೊಳ್ಳುತ್ತದೆ. ಈ ಸರ್ಕಾರ ಶೇ.85 ಕಮೀಷನ್ ಸರ್ಕಾರ ಎಂದು ದೂರಿದರು.

    ಬಿಜೆಪಿ ಮುಖಂಡರಾದ ಭಾರತಿ ಶೆಟ್ಟಿ ಮಾತನಾಡಿ, ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹೇಳಿದ್ದರು. ಶೇ.15ರಷ್ಟು ಜನರಿಗೆ ಶೇ.85% ಮಧ್ಯದಲ್ಲಿ ಸೋರಿಕೆ ಆಗುತ್ತದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಈಗ 85% ಕಮಿಷನ್ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

    ಮೇಲ್ಮನೆ ವಿರೋಧ ಪಕ್ಷದ ಉಪನಾಯಕ ಛಲವಾದಿ ನಾರಾಯಣ ಸ್ವಾಮಿ ಮಾತನಾಡಿ, ಬೋವಿ ನಿಗಮ ಅಷ್ಟೇ ಅಲ್ಲ. ಎಲ್ಲ ನಿಗಮಗಳು ಹಾಗೂ ಇಲಾಖೆಗಳಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಈ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.

    ವೀರೇಂದ್ರ ಹೆಗ್ಗಡೆಯವರೇ ನಮ್ಮ ಮನೆಯಿಂದ ಅನ್ಯಾಯ ಆಗಿದೆ ಇಲ್ಲಿಗೆ ನಿಲ್ಲಿಸಿಬಿಡಿ ಎಂದ್ರು; ವಿಜಯೇಂದ್ರ ಮುಂದೆ ಸೌಜನ್ಯಾ ತಾಯಿ ಸ್ಪೋಟಕ ಹೇಳಿಕೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading