Monday, August 3, 2026
spot_img
More
    spot_img
    HomeKarunaduವಾಟಾಳ್ ನಾಗರಾಜ್ ಕನ್ನಡ ಪ್ರೇಮ ಬಣ್ಣಿಸಿದ ಸಿಎಂ ಸಿದ್ದರಾಮಯ್ಯ

    ವಾಟಾಳ್ ನಾಗರಾಜ್ ಕನ್ನಡ ಪ್ರೇಮ ಬಣ್ಣಿಸಿದ ಸಿಎಂ ಸಿದ್ದರಾಮಯ್ಯ

    70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಂಗಳೂರು ನಗರದ ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.

    Advertisement

    ಬಳಿಕ ಮಾತನಾಡಿದ ಸಿದ್ದರಾಮಯ್ಯ, “ವಾಟಾಳ್ ನಾಗರಾಜ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡುತ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ” ಎಂದರು.

    “ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು‌. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು” ಎಂದು ಸಿದ್ದರಾಮಯ್ಯ ಕರೆ ನೀಡಿದರು.

    “ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ ಅಭಿಮಾನ ಮೂಡಲಿ” ಎಂದರು.

    “ಎಂಇಎಸ್‌ನವರೂ ಕನ್ನಡಿಗರೇ. ಅವರಲ್ಲಿ ಯಾರಾದರೂ ಪುಂಡಾಟಿಕೆ ಮಾಡಿದರೆ ಅದನ್ನು ಮಟ್ಟಹಾಕುತ್ತೇವೆ. ಗಡಿ ಭಾಗದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಅಗತ್ಯ ಇರುವುದನ್ನೆಲ್ಲಾ ಮಾಡಲು ಸರ್ಕಾರ ಸಿದ್ದವಿದೆ. ಬೆಳಗಾವಿ ವಿಚಾರದಲ್ಲಿ ರಾಜಿ ಇಲ್ಲ. ಮಹಾಜನ್ ವರದಿಯೇ ಅಂತಿಮ. ಬೆಳಗಾವಿ ಕನ್ನಡದ ನೆಲ, ಕರ್ನಾಟಕದ ಭಾಗ. ಇದನ್ನು ಅಲ್ಲಗಳೆಯಲು ಯಾರಿಂದಲೂ ಸಾಧ್ಯವಿಲ್ಲ. ಕನ್ನಡ ಹೋರಾಟಗಾರರ ಮೇಲಿನ ಕೇಸುಗಳನ್ನು ವಾಪಾಸ್ ತೆಗೆದುಕೊಳ್ಳುತ್ತೇವೆ” ಎಂದು ಸಿದ್ದರಾಮಯ್ಯ ಭರವಸೆ ನೀಡಿದರು.

    ಗೌರವ ಡಾಕ್ಟರೇಟ್: ಸಿದ್ದರಾಮಯ್ಯ ಅವರು, “ಮೈಸೂರು ವಿಶ್ವ ವಿದ್ಯಾಲಯದಿಂದ ದೇವರಾಜು ಅರಸು ಅವರಿಗೆ ಮರಣೋತ್ತರ ಡಾಕ್ಟರೇಟ್ ಪ್ರಶಸ್ತಿ ನೀಡಬೇಕು ಎನ್ನುವ ವಾಟಾಳ್ ನಾಗರಾಜ್ ಮತ್ತು ಸಾ.ರಾ. ಗೋವಿಂದು ಅವರ ಬೇಡಿಕೆಗೆ ವಿಚಾರವಾಗಿ ಸಿಂಡಿಕೇಟ್ ಸದಸ್ಯರ ಜೊತೆ ಚರ್ಚಿಸಲಾಗುವುದು. ಇಲ್ಲಿಯವರೆಗೂ ಅರಸು ಅವರಿಗೆ ಡಾಕ್ಟರೇಟ್ ಏಕೆ ಕೊಟ್ಟಿಲ್ಲ ಎಂಬುದು ತಿಳಿದಿಲ್ಲ, ಈ ಬಗ್ಗೆ ಗಮನ ಹರಿಸುತ್ತೇನೆ” ಎಂದರು.

    “ಮೈಸೂರು ವಿವಿಯಲ್ಲಿ ನನಗೆ ಹಿಂದೆಯೇ ಡಾಕ್ಟರೇಟ್ ಕೊಡುತ್ತೇನೆ ಎಂದಿದ್ದರು. ಆದರೆ ನಾನು ಪಡೆಯಲಿಲ್ಲ. ಬೇಡ ಎಂದು ಹೇಳಿದೆ. ಓದಿ, ಜ್ಞಾನ ವಿಸ್ತಾರ ಮಾಡಿಕೊಂಡು ಡಾಕ್ಟರೇಟ್ ಪಡೆಯಬೇಕು ಎನ್ನುವುದು ನನ್ನ ವೈಯುಕ್ತಿಕ ಭಾವನೆ. ನಾನು ವೈಯುಕ್ತಿಕವಾಗಿ ದ್ವಿಭಾಷಾ ಪರವಾಗಿ ಇದ್ದೇನೆ. ಆದರೆ ದ್ವಿಭಾಷಾ ನೀತಿಯಾಗಿ ಕಾನೂನು ಜಾರಿ ಆಗಬೇಕಾದರೆ ಕ್ಯಾಬಿನೆಟ್‌ನಲ್ಲಿ ಚರ್ಚಿಸಬೇಕಾಗುತ್ತದೆ” ಎಂದು ತಿಳಿಸಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading