Sunday, September 20, 2026
spot_img
More
    spot_img
    HomeLatest newsಶಾಸಕರ ಪುತ್ರನಿಗೆ ಶಿವಕುಮಾರ ಎಂದು ನಾಮಕರಣ ಮಾಡಿದ ಡಿಕೆ ಶಿವಕುಮಾರ್

    ಶಾಸಕರ ಪುತ್ರನಿಗೆ ಶಿವಕುಮಾರ ಎಂದು ನಾಮಕರಣ ಮಾಡಿದ ಡಿಕೆ ಶಿವಕುಮಾರ್

    ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ಶಾಸಕರ ಪುತ್ರನಿಗೆ ‘ಶಿವಕುಮಾರ’ ಎಂದು ನಾಮಕರಣ ಮಾಡಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ‘ಈ ಶಿವಕುಮಾರ ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ’ ಎಂದು ಹೇಳಿದ್ದಾರೆ.

    Advertisement

    ಕುಡಚಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಮಹೇಂದ್ರ ತಮ್ಮಣ್ಣನವರ್ ಕುಟುಂಬದ ಜೊತೆ ಬೆಂಗಳೂರಿನ ಗೃಹ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದರು. ಈ ಸಂದರ್ಭದಲ್ಲಿ ಮಗುವಿಗೆ ಶಿವಕುಮಾರ ಎಂದು ನಾಮಕರಣ ಮಾಡಲಾಗಿದೆ.

    ಈ ಕುರಿತು ಪೋಸ್ಟ್ ಹಾಕಿರುವ ಡಿ.ಕೆ.ಶಿವಕುಮಾರ್, ‘ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!
    ನನ್ನ ಗೃಹಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!’ ಎಂದು ಹೇಳಿದ್ದಾರೆ.

    ‘ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ. ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ’ ಎಂದು ತಿಳಿಸಿದ್ದಾರೆ.

    ಯಾರು ಮಹೇಂದ್ರ ತಮ್ಮಣ್ಣನವರ್?: ಬೆಳಗಾವಿ ಜಿಲ್ಲೆಯ ಕುಡಚಿ ಕ್ಷೇತ್ರದ ಕಾಂಗ್ರೆಸ್ ನಾಯಕ ಮಹೇಂದ್ರ ತಮ್ಮಣ್ಣನವರ್ 2023ರ ಚುನಾವಣೆಯಲ್ಲಿ 85,321 ಮತಗಳನ್ನು ಪಡೆದು ಶಾಸಕರಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಅವರು ಹಾಲಿ ಶಾಸಕರಾಗಿದ್ದ ಬಿಜೆಪಿಯ ಪಿ.ರಾಜೀವ (60,078 ಮತ) ಸೋಲಿಸಿದ್ದಾರೆ.

    ಕರ್ನಾಟಕ ವಿಧಾನಸಭೆ ಚುನಾವಣೆ 2023ಕ್ಕೆ ಅಭ್ಯರ್ಥಿಗಳ ಮೊದಲ ಪಟ್ಟಿ ಘೋಷಣೆ ಮಾಡಿದ್ದ ಕಾಂಗ್ರೆಸ್ ಪಕ್ಷ ಮಹೇಂದ್ರ ತಮ್ಮಣ್ಣನವರ್‌ ಕುಡಚಿ ಅಭ್ಯರ್ಥಿ ಎಂದು ಘೋಷಿಸಿತ್ತು. ಮೊದಲ ಪಟ್ಟಿಯಲ್ಲಿ ಟಿಕೆಟ್ ಪಡೆದ 12 ಅಭ್ಯರ್ಥಿಗಳಲ್ಲಿ ಮಹೇಂದ್ರ ತಮ್ಮಣ್ಣನವರ್ ಸಹ ಒಬ್ಬರಾಗಿದ್ದರು.

    ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಕ್ಷದ ಅಭ್ಯರ್ಥಿ ಮಹೇಂದ್ರ ತಮ್ಮಣ್ಣನವರ್ ಪರವಾಗಿ ಪ್ರಚಾರವನ್ನು ಮಾಡಿದ್ದರು. ಮಹೇಂದ್ರ ತಮ್ಮಣ್ಣನವರ್ ಅವರನ್ನು ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿಕೊಡುವಂತೆ ಮತದಾರರಲ್ಲಿ ಮನವಿ ಮಾಡಿದ್ದರು.

    ಕುಡಚಿ ಬೆಳಗಾವಿ ಜಿಲ್ಲೆಯ ಮೀಸಲು ವಿಧಾನಸಾಭ ಕ್ಷೇತ್ರವಾಗಿದೆ. ಮೊದಲು ಕ್ಷೇತ್ರವನ್ನು ಕಾಂಗ್ರೆಸ್‌ನ ಘಾಟಗೆ ಶಮಾ ಭೀಮ ಪ್ರತಿನಿಧಿಸುತ್ತಿದ್ದರು. ಅವರು 2008ರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹೇಂದ್ರ ಕೆ.ತಮ್ಮಣ್ಣವರ್ ಅವರನ್ನು 696 ಮತಗಳ ಅಂತರದಿಂದ ಸೋಲಿಸಿದ್ದರು. ಆಗ ಪಿ.ರಾಜೀವ್ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಪಿ.ರಾಜೀವ ಬಿಜೆಪಿಗೆ ಬಂದರು. ಮಹೇಂದ್ರ ಕೆ.ತಮ್ಮಣ್ಣವರ್ ಕಾಂಗ್ರೆಸ್ ಸೇರಿದರು.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading