Sunday, September 20, 2026
spot_img
More
    spot_img
    HomeTop Storyಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ವಿಧಿವಶ

    ಸರಿಗಮಪ ಕಾರ್ಯಕ್ರಮದ ಜ್ಯೂರಿ ಎಸ್.ಬಾಲಿ ವಿಧಿವಶ

    ಬೆಂಗಳೂರು: ಕನ್ನಡದ ಖಾಸಗಿ ವಾಹಿನಿಯಲ್ಲಿ ಸರಿಗಮಪ ಕಾರ್ಯಕ್ರಮದ ಜ್ಯೂರಿಯಾಗಿದ್ದ ಎಸ್.ಬಾಲಿ ವಿಧಿವಶರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

    Advertisement

    ಎಸ್.ಬಾಲಿ ಅವರ ನಿಧನಕ್ಕೆ ನಿರೂಪಕಿ ಅನುಶ್ರೀ, ನಟಿ ಚಿತ್ಕಲಾ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

    ಖ್ಯಾತ ವಾದ್ಯಗಾರರು, ಸಂಗೀತ ನಿರ್ದೇಶಕರು, ಸರಿಗಮಪ ವೇದಿಕೆಯ ಜ್ಯೂರಿಯಾಗಿದ್ದ ಶ್ರೀ ಎಸ್.ಬಾಲಸುಬ್ರಹ್ಮಣ್ಯಂ ಅವರು, ರಿದಮ್‌ ಕಿಂಗ್‌ ಎಂದೇ ಫೇಮಸ್‌ ಆಗಿದ್ದರು.

    ಇನ್ನೂ ಬಾಲಿ ಅವರ ಸಂಗೀತ ಸೇವೆಗೆ ಹಲವು ಪ್ರಶಸ್ತಿಗಳು ದಕ್ಕಿದೆ. ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿ ಅವರ ಪಾಲಾಗಿತ್ತು. ಇದೀಗ ಅವರ ನಿಧನದಿಂದ ಸಂಗೀತ ಲೋಕಕ್ಕೆ ದೊಡ್ಡ ನಷ್ಟವಾಗಿದೆ.

    ಬಾಲಿ ಅವರ ನಿಧನಕ್ಕೆ ರಾಜೇಶ್‌ ಕೃಷ್ಣನ್‌, ಅರ್ಜುನ್‌ ಜನ್ಯ, ವಿಜಯ್‌ ಪ್ರಕಾಶ್‌ ಸೇರಿದಂತೆ ಹಲವು ಸಂಗೀತ ದಿಗ್ಗಜರು ಸಂತಾಪ ಸೂಚಿಸಿದ್ದು, ಬಾಲಿ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading