ಚಿಕ್ಕಬಳ್ಳಾಪುರ: ಕಾಂಗ್ರೆಸ್ ಪಾಳಯದಲ್ಲಿ ಅಸಮಾಧಾನ ಉಂಟಾಗಿದ್ದು, ಮುಖ್ಯಮಂತ್ರಿ ಹಾಗೂ ರಾಜ್ಯಾಧ್ಯಕ್ಷರ ಬದಲಾವಣೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.
ಅದರಲ್ಲೂ ಕಾಂಗ್ರೆಸ್ ಪಕ್ಷದ ಶಾಸಕ ಇಕ್ಬಾಲ್ ಹುಸೇನ್ ನೀಡಿದ ಹೇಳಿಕೆ ಭಾರೀ ಗೊಂದಲವನ್ನು ಎಬ್ಬಸಿತ್ತು. ತಾನು ಮಾತ್ರವಲ್ಲ 100 ಶಾಸಕರು ಮುಖ್ಯಮಂತ್ರಿ ಬದಲಾವಣೆ ಬಯಸಿದ್ದಾರೆ ಎಂದು ಹೇಳಿಕೆ ನೀಡಿದ್ದ ಇಕ್ಬಾಲ್ ಇನ್ನು ಮೂರು ತಿಂಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗಲಿದ್ದಾರೆ ಎಂದಿದ್ದರು.
ಹೀಗೆ ಪಕ್ಷದವರಿಂದಲೇ ಬದಲಾವಣೆ ಮಾತುಗಳನ್ನು ಆಲಿಸಿದ್ದ ಸಿದ್ದರಾಮಯ್ಯ ಇಂದು ( ಜುಲೈ 2 ) ಮಾಧ್ಯಮಗಳ ಮುಂದೆ 5 ವರ್ಷ ನಾನೇ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುವ ಮೂಲಕ ಮುಖ್ಯಮಂತ್ರಿ ಬದಲಾವಣೆ ಎನ್ನುತ್ತಿದ್ದ ಎಲ್ಲರಿಗೂ ಟಾಂಗ್ ಕೊಟ್ಟಿದ್ದಾರೆ.
ಪತ್ರಕರ್ತರೊಬ್ಬರು 5 ವರ್ಷ ನೀವೇ ಮುಖ್ಯಮಂತ್ರಿಯಾಗಿರುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ʼಹೌದು, 5 ವರ್ಷ ನಾನೇ ಸಿಎಂ. ನಿಮಗ್ಯಾಕೆ ಅನುಮಾನ ಬಂತು?ʼ ಎಂದು ಪ್ರಶ್ನಿಸಿದರು. ಅಲ್ಲದೇ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಅಶೋಕ್, ವಿಜಯೇಂದ್ರ ಇವರೆಲ್ಲ ಬಿಜೆಪಿಯವರು ನಮ್ಮ ಹೈಕಮಾಂಡ್ ಅಲ್ಲ ಎಂದು ಕಿಡಿಕಾರಿದರು.
ಕೊವಿಡ್ ವ್ಯಾಕ್ಸಿನ್ ತೆಗೆದುಕೊಂಡವರಿಗೆ ಹೃದಯಾಘಾತ? ಅಧ್ಯಯನದ ವರದಿ ಬಹಿರಂಗ
ಕೃಷಿ ಕನ್ನಡ ಎಐ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


