Tuesday, September 1, 2026
spot_img
More
    spot_img
    HomeLatest newsಪಹಲ್ಗಾಮ್‌ ದಾಳಿಯ ಬಳಿಕ ಹತ್ಯೆಯಾಗಿದ್ದೆಷ್ಟು ಭಯೋತ್ಪಾದಕರು?

    ಪಹಲ್ಗಾಮ್‌ ದಾಳಿಯ ಬಳಿಕ ಹತ್ಯೆಯಾಗಿದ್ದೆಷ್ಟು ಭಯೋತ್ಪಾದಕರು?

    ನವದೆಹಲಿ: ಪಹಲ್ಗಾಮ್ ದಾಳಿಯ ನಂತರ ಸಶಸ್ತ್ರ ಪಡೆಗಳು ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಚುರುಕುಗೊಳಿಸಿದ್ದು , 100 ದಿನಗಳಲ್ಲಿ 12 ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲಾಗಿದೆ.

    Advertisement


    ಹತರಾದ 12 ಜನರಲ್ಲಿ ಆರು ಮಂದಿ ಪಾಕಿಸ್ತಾನಿ ಭಯೋತ್ಪಾದಕರು, ಉಳಿದವರು ಜಮು ಮತ್ತು ಕಾಶೀರದಲ್ಲಿ ನಡೆದ ಪ್ರಮುಖ ಭಯೋತ್ಪಾದಕ ದಾಳಿಗಳಲ್ಲಿ ಭಾಗಿಯಾಗಿರುವ ಸ್ಥಳೀಯರು ಸೇರಿದ್ದಾರೆ. ಇದಲ್ಲದೆ, ಮೇ 6-7ರ ನಡುವೆ ನಡೆದ ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನ ಪಡೆಗಳು 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದರು.


    ಮೇ ತಿಂಗಳಿನಿಂದ, ಬಹು-ಸಂಸ್ಥೆಗಳ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಅದರಲ್ಲಿ ಅತ್ಯಂತ ಮಹತ್ವದ್ದಾಗಿರುವುದು ಆಪರೇಷನ್ ಮಹಾದೇವ್, ಇದರಲ್ಲಿ ಪಹಲ್ಗಾಮ್ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ನಿಗ್ರಹಿಸಲಾಗಿತ್ತು. ಜುಲೈ 28 ರಂದು, ಶ್ರೀನಗರದ ದಚಿಗಮ್ ಪ್ರದೇಶದ ಬಳಿ ಸೇನೆ, ಸಿಆರ್‍ಪಿಎಫ್ ಮತ್ತು ಜಮು ಮತ್ತು ಕಾಶೀರ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‍ಇಟಿ) ಭಯೋತ್ಪಾದಕರಾದ ಸುಲೇಮಾನ್, ಅಫ್ಘಾನ್ ಮತ್ತು ಜಿಬ್ರಾನ್ ಅವರನ್ನು ಹತ್ಯೆ ಮಾಡಲಾಗಿತ್ತು.


    ಮರುದಿನವೇ, ಶಿವಶಕ್ತಿ ಎಂಬ ಹೆಸರಿನ ಮತ್ತೊಂದು ಕಾರ್ಯಾಚರಣೆಯನ್ನು ನಡೆಸಲಾಯಿತು, ಅಲ್ಲಿ ಸೇನೆಯು ಇನ್ನಿಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿತ್ತು. ಈ ಕಾರ್ಯಾಚರಣೆಗಳ ಸಂಖ್ಯೆಯ ಬಗ್ಗೆ ನಾವು ಮಾತನಾಡಿದರೆ, ಅಂಕಿಅಂಶವನ್ನು ನಿಗದಿಪಡಿಸುವುದು ತುಂಬಾ ಕಷ್ಟ. ಜಮ್ಮು ಮತ್ತು ಕಾಶೀರದಾದ್ಯಂತದ ಎಲ್ಲಾ ಘಟಕಗಳು ಆಯಾ ಪ್ರದೇಶಗಳಲ್ಲಿ ನಿರಂತರವಾಗಿ ಈ ಪ್ರತಿದಾಳಿ ಕಾರ್ಯಾಚರಣೆಗಳನ್ನು ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ.


    ಪಹಲ್ಗಾಮ್ ದಾಳಿಯ ನಂತರದ ಮೊದಲ ವಾರದಲ್ಲಿ ನಾಲ್ಕು ಪ್ರಮುಖ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಯಿತು. ಕಾರ್ಯಾಚರಣೆಗಳು ಮುಖ್ಯವಾಗಿ ಶೋಪಿಯಾನ್ ಮತ್ತು ಪುಲ್ವಾಮಾ ಸೇರಿದಂತೆ ದಕ್ಷಿಣ ಕಾಶೀರದಲ್ಲಿ ಕೇಂದ್ರೀಕೃತವಾಗಿದ್ದವು. ಮೇ ಮಧ್ಯದ ನಂತರ ಇನ್ನೂ ಎರಡು ನಿರ್ಣಾಯಕ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದವು.

    ಬಿಎಸ್ಎನ್ಎಲ್ ರೂ.1 ಪ್ಲಾನ್: ಕೇವಲ ₹1ಕ್ಕೆ ಆಜಾದಿ ಕಾ ಪ್ಲಾನ್ ನಂಬಲಾಗದ ಕೊಡುಗೆಗಳೊಂದಿಗೆ ಲಭ್ಯ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading