ಹೈಕಮಾಂಡ್ ಸೂಚನೆಯಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕೆ.ಎನ್ ರಾಜಣ್ಣ ಬಿಜೆಪಿಗೆ ಅರ್ಜಿ ಹಾಕಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ ಹೇಳಿದ್ದಾರೆ.
ಮಾತು ಮನೆ ಕೆಡಿಸಿತು ತೂತು ಒಲೆ ಕೆಡಿಸಿತು ಎಂಬ ಮಾತಿದೆ ಕೆಎನ್ ರಾಜಣ್ಣ ತಮ್ಮ ಮಾತಿನಿಂದಲೇ ಕೆಟ್ಟು ಹೋದರು. ಸುಮ್ಮನೆ ಪಕ್ಷದ ಮೇಲೆ ಗೂಬೆ ಕೂರಿಸಲು ಪಿತೂರಿ ನಡೆಯುತ್ತಿದೆ. ರಾಜಣ್ಣ ಯಾರ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಯಲಿದೆ.ಬೇರೆ ಬೇರೆ ಪಕ್ಷದ ನಾಯಕರಾದ ಜೊತೆಗೆ ಸಂಪರ್ಕದಲ್ಲಿ ಇದ್ದಾರೆ. ನಮ್ಮ ಸರ್ಕಾರ ಇದೆ ಎಂದು ಪಕ್ಷದಲ್ಲಿ ಇದ್ದಾರೆ.ಇಲ್ಲದಿದ್ದರೆ ಇಷ್ಟೊತ್ತಿಗೆ ಪಕ್ಷ ಬಿಟ್ಟು ಹೋಗುತ್ತಿದ್ದರು . ಈಗಾಗಲೇ ರಾಜಣ್ಣ ಒಂದು ಹೆಜ್ಜೆ ಹೊರಗಡೆ ಇಟ್ಟಿದ್ದಾರೆ ಎಂದರು ಕಾಂಗ್ರೆಸ್ ಶಾಸಕ ಎಚ್ ಸಿ ಬಾಲಕೃಷ್ಣ .
ಸಚಿವ ಸಂಪುಟದಿಂದ ವಜಾಗೊಂಡ ರಾಜಣ್ಣ ಸದ್ಯ ಸೈಲೆಂಟ್ ಆಗಿದ್ದಾರೆ. ಆದರೆ ತೆರೆಮರೆಯಲ್ಲಿ ಏನೆಲ್ಲಾ ತಂತ್ರಗಾರಿಕೆ ನಡೆಸುತ್ತಿದ್ದಾರೆ ಎಂಬುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ತನ್ನ ಮುಂದಿನ ಹೆಜ್ಜೆಯ ಬಗ್ಗೆ ಅವರು ಯಾವುದೇ ಸುಳಿವನ್ನು ಬಿಟ್ಟುಕೊಟ್ಟಿಲ್ಲ. ರಾಜಣ್ಣ ಬಿಜೆಪಿ ಸೇರುತ್ತಾರೊ ಅಥವಾ ಕಾಂಗ್ರೆಸ್ ನಲ್ಲೆ ಇರುತ್ತಾರೊ ಕಾದು ನೋಡಬೇಕು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


