ತುಮಕೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಮದುವೆಯ ಸಿದ್ಧತೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಪ್ರಸಿದ್ಧ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಶ್ರೀಗಳಿಗೆ ಆಹ್ವಾನ ನೀಡಿದ್ದಾರೆ.
ಮಠಕ್ಕೆ ಭೇಟಿ ನೀಡಿದ ಬಳಿಕ ಡಾಲಿ ಧನಂಜಯ್ ಅವರು ಮೊದಲಿಗೆ ಲಿಂಗೈಕ್ಯ ಶಿವಕುಮಾರ ಶ್ರೀಗಳ ಗದ್ದುಗೆಗೆ ಲಗ್ನ ಪತ್ರಿಕೆಯನ್ನಿಟ್ಟು ವಿಶೇಷ ಪೂಜೆ ಸಲ್ಲಿಸಿದರು. ತದನಂತರದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮಿಗಳ ಆಶೀರ್ವಾದ ಪಡೆದು ಮದುವೆಗೆ ಬರುಬೇಕು ಎಂದು ಆಹ್ವಾನ ನೀಡಿದರು. ಈ ವೇಳೆ ಡಾಲಿ ಧನಂಜಯ್ ಜೊತೆ ಸ್ನೇಹಿತರು ಸಹ ಇದ್ದು ಸಾಥ್ ನೀಡಿದರು.
ಮುಂದಿನ ತಿಂಗಳ ಫೆಬ್ರವರಿ.16ಕ್ಕೆ ನಟ ಡಾಲಿ ಧನಂಜಯ್ ಅವರು ವೈಧ್ಯೆ ಧನ್ಯತಾ ಅವರೊಂದಿಗೆ ಹಸೆಮಣೆ ಏರಲಿದ್ದಾರೆ. ಈ ಹಿಂದೆ ನವೆಂಬರ್.17ರಂದು ಧನಂಜಯ್ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಈ ಹಿನ್ನೆಲೆಯಲ್ಲಿ ಗಣ್ಯರು ಹಾಗೂ ಚಿತ್ರರಂಗದ ಪ್ರಮುಖರಿಗೆ ಮದುವೆ ಆಹ್ವಾನ ಪತ್ರಿಕೆ ಕೊಡುತ್ತಿರುವ ಡಾಲಿ ಧನಂಜಯ್ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ವಿಜಯೇಂದ್ರ, ಸುತ್ತೂರು ಶ್ರೀ ಸೇರಿದಂತೆ ಹಲವು ಗಣ್ಯರಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಡಾಲಿ ಧನಂಜಯ್ ಅವರ ಮದುವೆ ಅದ್ಧೂರಿಯಾಗಿ ಜರುಗಲಿದ್ದು, ಗಣ್ಯಾತಿಗಣ್ಯರು ಸಾಕ್ಷಿಯಾಗಲಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


