ಪ್ರಸ್ತುತ ಜರುಗುತ್ತಿರುವ ಮಹಾಕುಂಭ ಮೇಳಾದಲ್ಲಿ ಕೆಲ ದಿನಗಳ ಹಿಂದಷ್ಟೇ ಮೌನಿ ಅಮಾವಾಸ್ಯೆಯಂದು ನಡೆದ ಕಾಲ್ತುಳಿತ ದುರಂತದಲ್ಲಿ ಕನಿಷ್ಟ 30 ಮಂದಿ ಸಾನ್ನಪ್ಪಿದ್ದರು ಎಂದು ವರದಿಯಾಗಿತ್ತು.
ಇನ್ನು ಈ ಕಾಲ್ತುಳಿತ ಪ್ರಕರಣದಲ್ಲಿ ಉತ್ತರ ಪ್ರದೇಶ ಹಾಗೂ ಕೇಂದ್ರ ಸರ್ಕಾರ ಸರಿಯಾದ ನಡೆಯನ್ನು ಅನುಸರಿಸಿಲ್ಲ ಎಂದು ವಿಭಿನ್ನ ಸನ್ನಿವೇಶಗಳನ್ನುಲ್ಲೇಖಿಸಿ ಟೀಕಿಸಲಾಗುತ್ತಿದೆ. ಹೌದು, ಯೋಗಿ ಸರ್ಕಾರ ಸಾಮಾನ್ಯ ಜನರಿಗೆ ಹಾಗೂ ವಿಐಪಿಗಳಿಗೆ ಪ್ರತ್ಯೇಕ ಸ್ನಾನದ ವ್ಯವಸ್ಥೆ ಮಾಡಿದ್ದೇ ಈ ದುರಂತಕ್ಕೆ ಕಾರಣ ಎಂದು ಹಲವರು ಆರೋಪಿಸಿದ್ದು, ಇದೀಗ ಶವಗಳ ಕುರಿತಾಗಿ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ಹೊಸ ಬಾಂಬ್ ಸಿಡಿಸಿದ್ದಾರೆ.
ಸದನದಲ್ಲಿ ಮಾತನಾಡಿದ ಜಯಾ ಬಚ್ಚನ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು, ʼಈಗ ದೇಶದಲ್ಲಿ ಅತಿ ಕಲುಷಿತ ನೀರು ಎಲ್ಲಿದೆ ಎಂದು ಕೇಳಿದರೆ, ಮಹಾಕುಂಭದಲ್ಲಿದೆ ಎಂದು ಉತ್ತರ ಬರಲಿದೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಶವಗಳನ್ನು ನದಿಗೆ ಎಸೆಯಲಾಗಿದೆ. ಇದರಿಂದಾಗಿ ನೀರು ಇನ್ನಷ್ಟು ಕಲುಷಿತವಾಗಿದೆ.ʼ ಎಂದು ಕಿಡಿಕಾರಿದ್ದಾರೆ.
ಇನ್ನೂ ಮುಂದುವರಿದು ಮಾತನಾಡಿದ ಜಯಾ ಬಚ್ಚನ್ ʼಮೃತದೇಹಗಳನ್ನು ನದಿಗೆ ಎಸೆಯಲಾದ ಕಾರಣ ನೀರು ಕಲುಷಿತಗೊಂಡಿದೆ. ಅದೇ ನೀರನ್ನು ಜನ ಸಾಮಾನ್ಯರಿಗೆ ಪೂರೈಸಲಾಗುತ್ತಿದೆ. ಆದರೆ ಉತ್ತರ ಪ್ರದೇಶ ಸರ್ಕಾರ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲʼ ಎಂದಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


