Monday, August 10, 2026
spot_img
More
    spot_img
    HomeSportsCricketಈ ಬಾರಿ ಏಷ್ಯಾ ಕಪ್ ನಲ್ಲಿ ಈ ಆಟಗಾರರು ಇಲ್ಲ

    ಈ ಬಾರಿ ಏಷ್ಯಾ ಕಪ್ ನಲ್ಲಿ ಈ ಆಟಗಾರರು ಇಲ್ಲ

    ಏಷ್ಯಾ ಕಪ್ ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಈ ಬಾರಿ ಏಷ್ಯಾ ಕಪ್​ಗೆ ಭಾರತ ತಂಡದ ಆಟಗಾರರು: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

    Advertisement

    ಈ ಹಿಂದೆ ಟಿ20 ವಿಶ್ವಕಪ್ ತಂಡದಲ್ಲಿ ಕಾಣಿಸಿಕೊಂಡಿದ್ದ ಕೆಲ ಆಟಗಾರರಿಗೆ ಈ ಬಾರಿಯ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಅನೇಕ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ.

    ವಿರಾಟ್ ಕೊಹ್ಲಿ: ಟಿ20 ವಿಶ್ವಕಪ್ 2024 ರಲ್ಲಿ ಫೈನಲ್ ಪಂದ್ಯದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದರು.ಹೀಗಾಗಿ ಮುಂಬರುವ ಏಷ್ಯಾಕಪ್ ಟೂರ್ನಿಯಲ್ಲಿ  ಕಿಂಗ್ ಕೊಹ್ಲಿ ಕಾಣಿಸಿಕೊಳ್ಳುವುದಿಲ್ಲ. 

    ಮೊಹಮ್ಮದ್ ಶಮಿ: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಉತ್ತಮ ಆಟಗಾರರಾದ ಮೊಹಮ್ಮದ್ ಶಮಿಗೆ ಏಷ್ಯಾಕಪ್ ತಂಡದಲ್ಲಿ ಸ್ಥಾನ ನೀಡಲಾಗಿಲ್ಲ.

    ಕೆಎಲ್ ರಾಹುಲ್:ಚಾಂಪಿಯನ್ಸ್​ ಟ್ರೋಫಿ ಟೂರ್ನಿಯಲ್ಲಿ ಭಾರತದ ಗೆಲುವಿಗೆ ಕಾರಣರಾದ ಕೆಎಲ್ ರಾಹುಲ್ ಅವರಿಗೂ ಏಷ್ಯಾಕಪ್ ತಂಡದಲ್ಲಿ ಸ್ಥಾನ ದೊರೆತಿಲ್ಲ.

    ರೋಹಿತ್ ಶರ್ಮಾ: 2024ರ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದು ರೋಹಿತ್ ಶರ್ಮಾ. ವಿದಾಯ ಹೇಳಿದ್ದರು ಹಾಗಾಗಿ ಈ ಬಾರಿಯ ಏಷ್ಯಾಕಪ್ ತಂಡದ ಆಯ್ಕೆಗೆ​ ರೋಹಿತ್ ಶರ್ಮಾ ಅವರನ್ನು ಪರಿಗಣಿಸಲಾಗಿಲ್ಲ.

    ರವೀಂದ್ರ ಜಡೇಜಾ: ಟಿ20 ವಿಶ್ವಕಪ್​ ಗೆಲುವಿನ ಬೆನ್ನಲ್ಲೇ ನಿವೃತ್ತಿ ಘೋಷಿಸಿದ್ದರು ರವೀಂದ್ರ ಜಡೇಜಾ ಹೀಗಾಗಿ ಅವರನ್ನೂ ಸಹ ಏಷ್ಯಾಕಪ್​ ತಂಡಕ್ಕೆ ಆಯ್ಕೆಗೆ ಪರಿಗಣಿಸಲಾಗಿಲ್ಲ.

    ಯುಜ್ವೇಂದ್ರ ಚಹಲ್: 2024ರ ಟಿ20 ವಿಶ್ವಕಪ್​ನಲ್ಲಿ ಯುಜ್ವೇಂದ್ರ ಚಹಲ್ ಸ್ಪಿನ್ನರ್ ಆಗಿ ಸ್ಥಾನ ಪಡೆದಿದ್ದರು.‌ಇದೀಗ ಏಷ್ಯಾಕಪ್ ತಂಡದಲ್ಲೂ ಸ್ಥಾನ ಪಡೆದಿಲ್ಲ.

    ರಿಷಭ್ ಪಂತ್: ಟಿ20 ವಿಶ್ವಕಪ್ 2024 ರಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಆಗಿ ರಿಷಭ್ ಪಂತ್ ಇದ್ದರು. ಈ ಬಾರಿ ಏಷ್ಯಾಕಪ್​ನಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಿತ್ತು. ಆದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆ ಗಾಯಗೊಂಡಿರುವ ಕಾರಣ ಅವರನ್ನು ಏಷ್ಯಾಕಪ್ ತಂಡದಿಂದ ಹೊರಗಿಡಲಾಗಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading