Saturday, September 19, 2026
spot_img
More
    spot_img
    HomeLatest newsಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ವಿಚಾರ: ಕೈ ಎತ್ತಿದ್ದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಯದುವೀರ್

    ಪೊಲೀಸ್ ಅಧಿಕಾರಿ ಸ್ವಯಂ ನಿವೃತ್ತಿ ವಿಚಾರ: ಕೈ ಎತ್ತಿದ್ದ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಯದುವೀರ್

    ಮೈಸೂರು: ಪೊಲೀಸ್‌ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

    Advertisement

    ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೈದ ಕಾರಣ ಪೊಲೀಸ್‌ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪೊಲೀಸ್‌ ಅಧಿಕಾರಿ ಮಾನಸಿಕವಾಗಿ ಕುಗ್ಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಅಧಿಕಾರಿಗಳು ತಪ್ಪು ಮಾಡಿದ್ದರೆ, ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿ. ಈ ರೀತಿ ಬಹಿರಂಗವಾಗಿ ಅಧಿಕಾರಿಗೆ ಅವಮಾನ ಮಾಡುವುದು ಸರಿಯಲ್ಲ. ಇದು ನಮ್ಮ ರಾಜ್ಯದಲ್ಲಿ ಮಾತ್ರ ಅಲ್ಲ ಎಲ್ಲೂ ಆಗಬಾರದು. ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಸ್ಪರ ಗೌರವ ಕೊಟ್ಟು ಕೆಲಸ ಮಾಡಬೇಕು.
    ಸಿಎಂ ಸಿದ್ದರಾಮಯ್ಯ ನಡೆದುಕೊಂಡು ರೀತಿಯನ್ನು ಎಲ್ಲರೂ ಮಾಧ್ಯಮಗಳಲ್ಲಿ ನೋಡಿದ್ದಾರೆ. ಸಿಎಂ ಸಿದ್ದರಾಮಯ್ಯ ವರ್ತನೆ ಸರಿ ಇರಲಿಲ್ಲ. ಅಧಿಕಾರಿಗಳು ಜನಪ್ರತಿನಿಧಿಗಳ ಆದೇಶ ಪಾಲಿಸಬೇಕು. ಒಂದು ವೇಳೆ ಪಾಲಿಸದಿದ್ದರೆ ಅದನನು ಕೇಳಲು ಸಾಕಷ್ಟು ಮಾರ್ಗಗಳಿವೆ. ಅದನ್ನ ಬಿಟ್ಟು ಈ ರೀತಿ ನಿಂದಿಸಿದ್ದು ಸರಿಯಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಇನ್ನು ಚಾಮರಾಜನಗರದಲ್ಲಿ ಹುಲಿಗಳು ಹಾಗೂ ಕೋತಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಈ ಸಂಬಂಧ ಚಾಮರಾಜನಗರದ ಯಾವುದೇ ಜನಪ್ರತಿನಿಧಿಗಳು ಧ್ವನಿ ಎತ್ತುತ್ತಿಲ್ಲ. ಇದೊಂದು ಗಂಭೀರ ಸಮಸ್ಯೆ ಆಗಿದೆ. ಯಾಕೆ ಅವರಿಗೆ ಅರ್ಥ ಆಗುತ್ತಿಲ್ಲ ಎಂಬುದೇ ಗೊತ್ತಾಗುತ್ತಿಲ್ಲ. ಈ ವಿಚಾರದಲ್ಲಿ ನಾನು ಮಾತ್ರವೇ ಧ್ವನಿ ಎತ್ತುವ ಕೆಲಸ ಆಗುತ್ತಿದೆ. ಅರಣ್ಯ ರಾತ್ರಿ ಸಂಚಾರದ ಬಗ್ಗೆ ಕೂಡ ಸದನದಲ್ಲಿ ನಾನೊಬ್ಬನೇ ದನಿ ಎತ್ತುತ್ತಿದ್ದೇನೆ. ಚಾಮರಾಜನಗರ ಜನಪ್ರತಿನಿಧಿಗಳು ಇನ್ನಾದರೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಪ್ರಕರಣ ಸಂಬಂಧ ಅರಣ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಆಗಬೇಕು. ಅರಣ್ಯ ಅಧಿಕಾರಿಗಳು ಸಭೆ ಕರೆದಾಗಲೂ ಯಾರೂ ಬರುವುದಿಲ್ಲ. ಅರಣ್ಯದ ಬಗ್ಗೆ ನಮಗೆ ಏನೂ ಗೊತ್ತಿಲ್ಲ ಎಂದುಕೊಂಡಿದ್ದಾರೆ. ಆದರೆ ನಮಗೆ ಎಲ್ಲ ಗೊತ್ತಿದೆ. ಚಾಮರಾಜನಗರ ಶೇಕಡಾ 50ಕ್ಕೂ ಹೆಚ್ಚು ಅರಣ್ಯ ಹೊಂದಿದೆ. ಅದನ್ನ ಉಳಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.

    ಸೈಲೆಂಟ್ ಹೃದಯಾಘಾತ: ಕಾರಣಗಳು, ಲಕ್ಷಣಗಳು ಮತ್ತು ತಡೆಯುವ ಮಾರ್ಗಗಳು

    ಕೃಷಿ ಕನ್ನಡ ಎಐ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading