ಬೆಂಗಳೂರು: ಮುಷ್ಕರಕ್ಕೆ ಮುಂದಾರ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ.
ವಿವಿಧ ಬೇಡಿಕೆಗಳಿಗೆ ಆಗ್ರಹಿಸಿದ ನಾಳೆಯಿಂದ ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಲಿದ್ದು, ಸಾರಿಗೆ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ.
ಇನ್ನು ಮುಷ್ಕರಕ್ಕೆ ಮುಂದಾದ ರಾಜ್ಯದ ಸಾರಿಗೆ ನೌಕರರಿಗೆ ಬಿಗ್ ಶಾಕ್ ಎದುರಾಗಿದ್ದು, ರಜೆ ರದ್ದುಗೊಳಿಸಲು ಸೂಚನೆ ನೀಡಲಾಗಿದೆ. ಅಗತ್ಯಬಿದ್ದರೆ ವೀಕ್ಲಿ ಆಫ್ ಕೂಡ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವೇತನ ಹೆಚ್ಚಳ ಹಾಗೂ ವೇತನ ಹೆಚ್ಚಳ ಹಿಂಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಸಾರಿಗೆ ನೌಕರರು ನಾಳೆಯಿಂದ ಮುಷ್ಕರಕ್ಕೆ ಕರೆ ನೀಡಿದ್ದು, ಬೆಳಿಗ್ಗೆ 6 ಗಂಟೆಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ನೌಕರರು ಸಜ್ಜಾಗಿದ್ದು, ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ 4 ನಿಗಮಗಳಿಂದ ಒಟ್ಟು 23 ಸಾವಿರ ಬಸ್ಗಳು ರಸ್ತೆಗಿಳಿಯುವುದು ಅನುಮಾನವಾಗಿದೆ.
ನಾಳೆಯಿಂದ ಸಾರಿಗೆ ನೌಕರರು ಮುಷ್ಕರ ಕೈಗೊಂಡಿರುವ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದ್ದು, ಅನಿರ್ದಿಷ್ಟಾವಧಿ ಮುಷ್ಕರದ ಭವಿಷ್ಯ ನಿರ್ಧಾರವಾಗಲಿದೆ.
,ಪ್ರಜ್ವಲ್ ರೇವಣ್ಣ ಜೀವಾವಧಿ ಶಿಕ್ಷೆ; ಸಿಟಿ ರವಿ, ಅಶೋಕ್ ಮಾತನಾಡಿ ಎಂದು ಕುಟುಕಿದ ಡಿಕೆಶಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


