ಗದಗ: ಉತ್ತರ ಕರ್ನಾಟಕದ ಸೈಹಾದ್ರಿ, ಆಯುರ್ವೇದ ಔಷಧಿಯ ಸಸ್ಯಕಾಶಿ, ದೇಶದಲ್ಲಿಯೇ ಶುದ್ಧ ಗಾಳಿಗೆ ಹೆಸರಾದ ಜಿಲ್ಲೆಯ ಕಪ್ಪತ್ತಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಬೇಸಿಗೆ ಆರಂಭಕ್ಕೂ ಮುನ್ನೆ ಕಪ್ಪತ್ತಗುಡ್ಡ ಬೆಂಕಿಗಾಹುತಿಯಾಗಿದ್ದು, ಮುಂಡರಗಿ ತಾಲ್ಲೂಕಿನ ಡೋಣಿ ಗ್ರಾಮದ ಬಳಿ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿತ್ತು.
ಡೋಣಿ ಬಳಿಯ ನಂದಿವೇರಿ ಮಠದ ಹಿಂಭಾಗ, ಬಂಗಾರಕೊಳ್ಳ, ದೊಡ್ಡ ಬಂಗಾರಕೊಳ್ಳ, ಉಪ್ಪಾರತಟ್ಟು, ನವಣೆ ರಾಶಿ, ಎತ್ತಿನಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.
ಬೆಂಕಿಯ ಕೆನ್ನಾಲಿಗೆಗೆ ಸುಮಾರು ನೂರಾರು ಹೆಕ್ಟೇರ್ ಪ್ರದೇಶದ ಅರಣ್ಯ ಸುಟ್ಟು ಕರಕಲಾಗಿದೆ. ಬೆಂಕಿಗೆ ಸಿಲುಕಿ ಸರೀಸೃಪಗಳು, ಔಷಧೀಯ ಸಸ್ಯಗಳು, ಪ್ರಾಣಿ, ಪಕ್ಷಿಗಳು ಬೆಂಕಿಗಾಹುತಿಯಾಗಿವೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೊದಲು ಹಸಿರು ಕಾಶಿಗೆ ಮೊದಲು ಗಣಿ ಹಾಗೂ ಭೂಗಳ್ಳರಿಂದ ಕಪ್ಪತ್ತಗುಡ್ಡಕ್ಕೆ ಆಪತ್ತು ಬಂದಿತ್ತು. ಈಗ ಬೆಂಕಿ ಆಪತ್ತು ಬಂದೊದಗಿದೆ. ಯಾರೋ ಕಿಡಿಗೇಡಿಗಳ ಕೃತ್ಯದಿಂದ ಕಪ್ಪತ್ತಗುಡ್ಡ ಬೆಂಕಿ ಕೆನ್ನಾಲಿಗೆಗೆ ನಲುಗಿದೆ. ಗುಡ್ಡದಲ್ಲಿರುವ ವಿಂಡ್ ಫ್ಯಾನ್ನಿಂದ ಅವಘಡ ಸಂಭವಿಸಿದೆಯಾ? ಅಥವಾ ಕುರಿಗಾಹಿಗಳ ಕೃತ್ಯನಾ ಎನ್ನುವುದು ತನಿಖೆಯಿಂದ ತಿಳಿದು ಬರಬೇಕಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


