Friday, September 18, 2026
spot_img
More
    spot_img
    HomeTop Storyಆಸ್ಪತ್ರೆಗೆ ದಿಢೀರ್‌ ಭೇಟಿ ಕುರಿತು ಮಾತನಾಡಿ ಕಾರಣ ಬಿಚ್ಚಿಟ್ಟ ಉಪೇಂದ್ರ

    ಆಸ್ಪತ್ರೆಗೆ ದಿಢೀರ್‌ ಭೇಟಿ ಕುರಿತು ಮಾತನಾಡಿ ಕಾರಣ ಬಿಚ್ಚಿಟ್ಟ ಉಪೇಂದ್ರ

    ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಮುಖ ನಟ ಮತ್ತು ನಿರ್ದೇಶಕ ಉಪೇಂದ್ರ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಡಿದ ಊಹಾಪೋಹಗಳಿಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

    Advertisement

    “ಎಲ್ಲರಿಗೂ ನಮಸ್ಕಾರ.. ನಾನು ಆರೋಗ್ಯವಾಗಿದ್ದೇನೆ.. ರೆಗ್ಯುಲರ್ ಚೆಕ್ ಅಪ್‌ಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದೆ ಅಷ್ಟೇ.. ಯಾವುದೇ ಊಹಾ ಪೋಹಗಳಿಗೆ ಕಿವಿಕೊಟ್ಟು ಗೊಂದಲಕ್ಕಿಡಾಗಬೇಡಿ.. ನಿಮ್ಮ ಪ್ರೀತಿ ಕಾಳಜಿಗೆ ಅನಂತ ಧನ್ಯವಾದಗಳು,” ಎಂದು ಉಪೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ಇಂದು ಸಾಮಾಜಿಕ ಜಾಲತಾಣದಲ್ಲಿ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಎಂಬ ಸುದ್ದಿ ಹರಿದಾಡಿತ್ತು. ಆದರೆ, ಇದು ಕೇವಲ ದೈನಂದಿನ ಆರೋಗ್ಯ ತಪಾಸಣೆ ಮಾತ್ರ ಎಂದು ಉಪೇಂದ್ರ ಸ್ಪಷ್ಟಪಡಿಸಿದ್ದಾರೆ.

    ಇನ್ನು ಕಳೆದ ವರ್ಷ ತಮ್ಮದೇ ನಿರ್ದೇಶನದ ಯುಐ ಚಿತ್ರದ ಮೂಲಕ ನಿರೀಕ್ಷೆಯನ್ನು ಸಂಪೂರ್ಣವಾಗಿ ತಲುಪದಿದ್ದರೂ ಸದ್ದು ಮಾಡಿದ್ದ ಉಪೇಂದ್ರ ಸದ್ಯ ಅರ್ಜುನ್‌ ಜನ್ಯಾ ನಿರ್ದೇಶನದ 45 ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಜತೆ ನಟಿಸಿದ್ದಾರೆ. ಅಲ್ಲದೇ ಲೋಕೇಶ್‌ ಕನಕರಾಜ್‌ ನಿರ್ದೇಶನದ ಕೂಲಿ ಚಿತ್ರದಲ್ಲೂ ಸಹ ನಟಿಸಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading