Thursday, September 3, 2026
spot_img
More
    spot_img
    HomeStateDistrictವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆಗೆ ಗಜಪಡೆ ಆಗಮನದ ದಿನಾಂಕ ನಿಗದಿ

    ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅರಮನೆಗೆ ಗಜಪಡೆ ಆಗಮನದ ದಿನಾಂಕ ನಿಗದಿ

    ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿನ್ನೆ ತಾನೇ ಮೈಸೂರಿಗೆ ಆಗಮಿಸಿರುವ ಗಜಪಡೆ ಆಗಸ್ಟ್.‌10ರಂದು ಅರಮನೆಗೆ ಪ್ರವೇಶಿಸಲಿವೆ.

    Advertisement

    ಆಗಸ್ಟ್.‌10ರ ಭಾನುವಾರ ಸಂಜೆ 6.45 ರಿಂದ 7.20ರ ಗೋಧೊಳಿ ಲಗ್ನದಲ್ಲಿ ದಸರಾ ಗಜಪಡೆಗಳು ಅರಮನೆಗೆ ಎಂಟ್ರಿ ಆಗಲಿವೆ. ಅರಮನೆಯ ಪೂರ್ವ ದಿಕ್ಕಿನಲ್ಲಿರುವ ಜಯಮಾರ್ತಾಂಡ ದ್ವಾರದಿಂದ ಗಜಪಡೆಗಳು ಅರಮನೆ ಪ್ರವೇಶಿಸಲಿದ್ದು, ಇದನ್ನು ಸಾರ್ವಜನಿಕರು ಕೂಡ ಕಣ್ತುಂಬಿಕೊಳ್ಳಬಹುದಾಗಿದೆ.

    ಈಗಾಗಲೇ ಅರಮನೆ ಆವರಣದಲ್ಲಿ ದಸರಾ ಗಜಪಡೆಗಳು, ಮಾವುತರು ಹಾಗೂ ಕಾವಾಡಿಗರ ವಾಸ್ತವ್ಯಕ್ಕೆ ಎಲ್ಲಾ ಸಿದ್ಧತೆ ಮಾಡಲಾಗಿದ್ದು, ಭಾನುವಾರದಿಂದ ನಾಡಹಬ್ಬ ದಸರಾ ಮಹೋತ್ಸವ ಮುಗಿಯುವವರೆಗೂ ಆನೆಗಳು ಅರಮನೆ ಆವರಣದಲ್ಲೇ ಬೀಡುಬಿಡಲಿವೆ.

    ಇನ್ನು ಭಾನುವಾರ ಆನೆಗಳು ಅರಮನೆ ಪ್ರವೇಶಿಸುವ ವೇಳೆಗೆ ಸರಿಯಾಗಿ ಅರಮನೆ ದೀಪಾಲಂಕಾರ ಸಹ ಕಂಗೊಳಿಸಲಿದೆ. ದೀಪಾಲಂಕಾರದ ಸೌಂದರ್ಯದ ನಡುವೆಯೇ ಆನೆಗಳ ಅರಮನೆ ಪ್ರವೇಶದ ಸೊಬಗನ್ನು ಸವಿಯುವ ಅವಕಾಶ ಇದರಿಂದ ಲಭಿಸುತ್ತದೆ ಎಂದು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

    ,ಮುಷ್ಕರಕ್ಕೆ ಮುಂದಾಗಿದ್ದ ನೌಕರರ ಮೇಲೆ ಬಿಎಂಟಿಸಿ ಬ್ರಹ್ಮಾಸ್ತ್ರ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading