Sunday, August 30, 2026
spot_img
More
    spot_img
    HomeStateಧರ್ಮಸ್ಥಳ ಮೊಕದ್ದಮೆ ವರ್ಗಾವಣೆಗೆ ವಿನಂತಿ ಮಾಡಿದ ನ್ಯಾಯಾಧೀಶ ವಿಜಯಕುಮಾರ್‌ರೈ!

    ಧರ್ಮಸ್ಥಳ ಮೊಕದ್ದಮೆ ವರ್ಗಾವಣೆಗೆ ವಿನಂತಿ ಮಾಡಿದ ನ್ಯಾಯಾಧೀಶ ವಿಜಯಕುಮಾರ್‌ರೈ!

    ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪಕ್ಕೆ ಸಂಬಂಧಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡದಂತೆ ನಿರ್ದೇಶಿಸಲು ಅಸಲು ದಾವೆಯ ವಿಚಾರಣೆ ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಲು ಬೆಂಗಳೂರು ನಗರ ಜಿಲ್ಲಾ ಮತ್ತು ಪ್ರಧಾನ ಸೆಷನ್ಸ್ ನ್ಯಾಯಾಧೀಶರಿಗೆ 10ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ವಿಜಯಕುಮಾರ್‌ರೈ ಕೋರಿದ್ದಾರೆ.

    Advertisement

    ನ್ಯಾಯಾಧೀಶ ವಿಜಯ‌ಕುಮಾರ್ ರೈ ಅವರು ತಮ್ಮ ಮುಂದಿದ್ದ ಈ ಪ್ರಕರಣದಲ್ಲಿ, ‘ಕ್ಷೇತ್ರದ ಧರ್ಮಾಧಿಕಾರಿ‌ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ. ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಈ ಮೊದಲು ಏಕಪಕ್ಷೀಯ ಪ್ರತಿಬಂಧಕ ಆದೇಶ ನೀಡಿದ್ದರು. ನ್ಯಾಯಾಧೀಶ ರೈ ಅವರು ನೀಡಿದ್ದ ಪ್ರತಿಬಂಧಕ ಆದೇಶವನ್ನು ಪತ್ರಕರ್ತ ನವೀನ್ ಸೂರಿಂಜೆ, ಸಾಮಾಜಿಕ ಹೋರಾಟಗಾರ ಮುನೀರ್ ಕಾಟಿಪಳ್ಳ ಹಾಗೂ ಬೈರಪ್ಪ ಹರೀಶ್ ಕುಮಾರ್ ಪ್ರಶ್ನಿಸಿದ್ದರು.

    ‘ನ್ಯಾಯಾಧೀಶ ರೈ ಅವರು, ಡಿ. ಹರ್ಷೇಂದ್ರ ಕುಮಾರ್‌ ಕುಟುಂಬದಿಂದ ನಿರ್ವಹಣೆ ಮಾಡಲಾಗುತ್ತಿರುವ ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥ ಕಾನೂನು ಕಾಲೇಜಿನಲ್ಲಿ 25 ವರ್ಷಗಳ ಹಿಂದೆ ವಿದ್ಯಾರ್ಥಿಯಾಗಿದ್ದರು. ಹೀಗಾಗಿ, ಹಾಲಿ ಪ್ರಕರಣವನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸಬೇಕು’ ಎಂದು ಕೋರಿ ಮೆಮೊ ಸಲ್ಲಿಸಿದ್ದರು. ಈ ಕಾರಣದಿಂದ ನ್ಯಾಯಾಧೀಶ ರೈ ಅವರು, ‘ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಮುಂದುವರೆಸಲು ನ್ಯಾಯ ಒದಗಿಸಿದರಷ್ಟೇ ಸಾಲದು. ಅದು ಕಾಣುವಂತಿರಬೇಕು. ಈ ಮೊಕದ್ದಮೆಯಲ್ಲಿ ನಾನು ಯಾವುದೇ ವೈಯಕ್ತಿಕ ಆಸಕ್ತಿ ಹೊಂದಿಲ್ಲ. ಆದಾಗ್ಯೂ, ನಾನು ಧರ್ಮಸ್ಥಳ ಕಾಲೇಜಿನ ವಿದ್ಯಾರ್ಥಿಯಾಗಿದ್ದೆ. ಈ ಕಾರಣದಿಂದ, ಬೆಂಗಳೂರು ನಗರ ಸಿವಿಲ್‌ ನ್ಯಾಯಾಲಯ ಕಾಯ್ದೆ-1979ರ ಕಲಂ 13(2)(ಬಿ) ಪ್ರಕಾರ ಈ ಅಸಲು ದಾವೆ ಸಂಖ್ಯೆ No.5185/2025ರ ಈ ಮೊಕದ್ದಮೆಯನ್ನು ಬೇರೊಂದು ನ್ಯಾಯಾಲಯಕ್ಕೆ ವರ್ಗಾಯಿಸುವುದು ಸೂಕ್ತ’ ಎಂದು ಪ್ರಧಾನ ನ್ಯಾಯಾಧೀಶರಿಗೆ ವಿನಂತಿ ಮಾಡಿದ್ದಾರೆ.

    ,ಏರ್ ಇಂಡಿಯಾ ವಿಮಾನದಲ್ಲಿ ಜಿರಳೆ! ನಂತರ ಆದದ್ದೇನು?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading