ಮೈಸೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್ಗಳ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಬಸ್ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ತೀವ್ರ ಪರದಾಟ ನಡೆಸುತ್ತಿದ್ದಾರೆ. ಶಾಲಾ-ಕಾಲೇಜುಗಳಿಗೆ ಹೋಗಲು ವಿದ್ಯಾರ್ಥಿಗಳು ಬೆಳ್ಳಂಬೆಳಿಗ್ಗೆಯೇ ಪರದಾಟ ನಡೆಸಿದ್ದು, ಎಷ್ಟೋ ಮಕ್ಕಳು ಇಂದು ಶಾಲೆಗೆ ಹೋಗದೇ ಮನೆಯಲ್ಲಿ ಉಳಿದಿದ್ದಾರೆ.
ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆಯಲ್ಲಿಂದು ಖಾಸಗಿ ಬಸ್ಗಳು ರಸ್ತೆಗಿಳಿದಿದೆ. ಖಾಸಗಿ ಬಸ್ಸುಗಳಲ್ಲಿ ಜನರು ಪ್ರಯಾಣ ಬೆಳೆಸುತ್ತಿದ್ದು, ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಇನ್ನು ಸಾರಿಗೆ ನೌಕರರು ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯಲ್ಲ ಎಂದು ಬಿಗಿ ಪಟ್ಟು ಹಿಡಿದಿದ್ದಾರೆ.
ಈ ಹಿನ್ನೆಲೆಯಲ್ಲಿ ಸರ್ಕಾರ ಇನ್ನಾದರೂ ಈ ಬಗ್ಗೆ ಕ್ರಮ ಕೈಗೊಂಡು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸುತ್ತಾ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಜೋಡಿ ಮಾರ್ಗ ಕಾಮಗಾರಿ: ಗೋಲ್ಗುಂಬಜ್, ಇಂಟರ್ಸಿಟಿ ಸೇರಿದಂತೆ ಪ್ರಮುಖ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ
ಎಐ ಕೃಷಿ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


