Monday, August 31, 2026
spot_img
More
    spot_img
    HomeStateತುಮಕೂರಿನಲ್ಲಿ ನವಿಲುಗಳ ನಿಗೂಢ ಸಾವು! ಕಾರಣವೇನು ಗೊತ್ತೆ?

    ತುಮಕೂರಿನಲ್ಲಿ ನವಿಲುಗಳ ನಿಗೂಢ ಸಾವು! ಕಾರಣವೇನು ಗೊತ್ತೆ?

    ತುಮಕೂರಿನ ಮಧುಗಿರಿ ತಾಲೂಕಿನಲ್ಲಿ 19 ನವಿಲುಗಳು ಸಾವನ್ನಪ್ಪಿದ್ದು, ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಮಿಡಿಗೇಶಿಯ ಹನುಮಂತಪುರದಲ್ಲಿ 19 ನವಿಲುಗಳು ನಿಗೂಢವಾಗಿ ಮೃತಪಟ್ಟಿದೆ. ಜಮೀನು ಒಂದರಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿಗೆ ತೆರಳಿದ್ದ ಮಾಲೀಕರು ಜಮೀನಿನಲ್ಲಿ ಸತ್ತು ಬಿದ್ದಿದ್ದ ನವಿಲುಗಳನ್ನು ಕಂಡು ಸ್ಥಳೀಯ ಪೊಲೀಸರಿಗೂ ಹಾಗೂ ವಲಯದ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ.

    Advertisement

    14 ಹೆಣ್ಣು ನವಿಲುಗಳು ಸೇರಿ 19 ನವಿಲುಗಳ ಮೃತದೇಹ ಪತ್ತೆ ಆಗಿದೆ. ತನಿಖೆಯನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್‌) ನೇತೃತ್ವದ ತಂಡ ನಡೆಸಲಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ‘ನವಿಲುಗಳ ಸಾವಿನ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದರು.

    ಸಾವಿಗೆ ಕೀಟನಾಶಕ ಸೇವನೆ ಕಾರಣ ಎಂಬ ಅಂಶ ಮಾಧ್ಯಮಗಳಲ್ಲಿ ವರದಿಯಾಗಿದೆ. ನವಿಲುಗಳನ್ನು ಸಾಯಿಸಲೆಂದೇ ವಿಷ ಹಾಕಲಾಗಿತ್ತೆ ಅಥವಾ ಬೆಳೆಗಳಿಗೆ ಸಿಂಪಡಿಸಿದ ಕೀಟನಾಶಕಯುಕ್ತ ಫಸಲು ತಿಂದು ನವಿಲುಗಳು ಮೃತಪಟ್ಟಿವೆಯೇ ಎಂಬ ಬಗ್ಗೆ ತನಿಖೆ ನಡೆಸಿ, ಐದು ದಿನಗಳಲ್ಲಿ ವರದಿ ಸಲ್ಲಿಸಲು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಸೂಚಿಸಲಾಗಿದೆ’ ಎಂದರು.

    ,ಡೆತ್‌ ನೋಟ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಜಾನಪದ ಗಾಯಕಿಯ ಮಗ!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading