ಶಾಲೆಯ ಕಾಂಪೌಂಡ್ ಗಾಗಿ ಶಾಲೆ ತೊರೆದಿದ್ದಾಳೆ ಪುಟಾಣಿ ವಿದ್ಯಾರ್ಥಿನಿಯೋರ್ವಳು! ತಾನು ಕಾಂಪೌಂಡ್ ನಿರ್ಮಿಸಿಕೊಡುವವರೆಗೂ ಸ್ಕೂಲಿಗೆ ಬರುವುದಿಲ್ಲವೆಂದು ಹಠ ಹಿಡಿದು ಕುಳಿತಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬರೊಬ್ಬರಿ 105 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಶಾಲೆಯ ಪಕ್ಕದಲ್ಲೇ ಕಲ್ಯಾಣ ಮಂಟಪವಿದ್ದು, ಆಟದ ಮೈದಾನದಲ್ಲಿ ಕಲ್ಯಾಣ ಮಂಟಪಕ್ಕೆ ಬರುವ ಕಾರು, ಬಸ್ಸು ವಾಹನಗಳು ನಿಲ್ಲುತ್ತಿವೆ. ಊಟ ಮಾಡಿದ ಎಂಜಲು ಎಲೆಗಳನ್ನೆಲ್ಲ ಶಾಲೆಯ ಆವರಣದಲ್ಲೇ ಎಸೆಯಲಾಗುತ್ತಿದೆ. ಎಂಜಲು ಎಲೆಯ ಮೇಲೆಯೇ ಮಕ್ಕಳ ಊಟ ಪಾಠ ನಡೆಯುತ್ತಿದೆ.
ತುಮಕೂರು ತಾಲ್ಲೂಕಿನ ಬೆಳಧರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ನೇ ತರಗತಿ ವಿದ್ಯಾರ್ಥಿನಿ ಪಿಎಂ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಬಾಲಕಿ ನಿಮ್ಮಿಂದ ಉತ್ತರ ಸಿಗುವವರೆಗೂ ನಾನು ಶಾಲೆಗೆ ಹೋಗುವುದಿಲ್ಲ ಎಂದು ಹಠಹಿಡಿದು ಕುಳಿತಿದ್ದಾಳೆ.
2024 ರಲ್ಲಿ ಬಿಇಓ ಗೆ ಪತ್ರ ಬರೆದು ಮನವಿ ಮಾಡಿದ್ದ ಸಿಮ್ರಾ ಸನೋಬರ್ ಕಾಂಪೌಂಡ್ ನಿರ್ಮಿಸಿಕೊಡುವಂತೆ ಮನವಿ ಮಾಡಿದ್ದಳು. ಅಂದು ವಿದ್ಯಾರ್ಥಿನಿಗೆ ಕಾಂಪೌಂಡ್ ಕಟ್ಟಿಕೊಡುವ ಆಶ್ವಾಸನೆ ನೀಡಿದ್ದ ಬಿಇಓ, ಬಳಿಕ ಒಂದು ವರ್ಷ ಕಳೆದರೂ ಕಾಂಪೌಂಡ್ ನಿರ್ಮಾಣ ಮಾಡಿರಲಿಲ್ಲ.
ಇದರಿಂದ ನಮಗೆ ಆಟವಾಡಲು ತೊಂದರೆಯಾಗ್ತಿದೆ. ಕಾಂಪೌಂಡ್ ನಿರ್ಮಾಣ ಆಗೋವರೆಗೂ ಶಾಲೆಗೆ ಬರೊದಿಲ್ಲ ಎಂದು ಪತ್ರ ಸಿಮ್ರಾ ಸಿಎಂ ಸಿದ್ದರಾಮಯ್ಯ ಮತ್ತು ಪ್ರಧಾನಿ ನರೇಂದ್ರ ಮೋದಿಗೆ ಬರೆದು ಮನವಿ ಮಾಡಿಕೊಂಡಿದ್ದಾಳೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


