Thursday, September 3, 2026
spot_img
More
    spot_img
    HomeLatest newsಮೆಟ್ರೋ ದರ ಏರಿಕೆಗೆ ತೇಜಸ್ವಿ ಸೂರ್ಯ ಆಕ್ರೋಶ: ಸರ್ಕಾರದ ವಿರುದ್ಧ ತೀವ್ರ ಟೀಕೆ

    ಮೆಟ್ರೋ ದರ ಏರಿಕೆಗೆ ತೇಜಸ್ವಿ ಸೂರ್ಯ ಆಕ್ರೋಶ: ಸರ್ಕಾರದ ವಿರುದ್ಧ ತೀವ್ರ ಟೀಕೆ

    ಬೆಂಗಳೂರು ಸಂಸದ ತೇಜಸ್ವಿ ಸೂರ್ಯ ಅವರು ಬೆಂಗಳೂರು ಮೆಟ್ರೋ (ನಮ್ಮ ಮೆಟ್ರೋ) ಪ್ರಯಾಣ ದರವನ್ನು ಶೇ. 136 ರಷ್ಟು ಏರಿಕೆ ಮಾಡಿರುವುದಕ್ಕೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ದೇಶದಲ್ಲೇ ಅತಿ ದುಬಾರಿ ಮೆಟ್ರೋ ದರವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    Advertisement

    ಸೂರ್ಯ ನೀಡಿದ ಅಂಕಿಅಂಶಗಳ ಪ್ರಕಾರ, ದೆಹಲಿ ಮೆಟ್ರೋದಲ್ಲಿ ದರ ಏರಿಕೆ ಕನಿಷ್ಠ ₹1 ರಿಂದ ಗರಿಷ್ಠ ₹4ರೊಳಗಾಗಿ ಸೀಮಿತವಾಗಿದ್ದರೆ, ಬೆಂಗಳೂರಿನಲ್ಲಿ ಒಂದೇ ಸುತ್ತಿನಲ್ಲಿ ₹25ರಷ್ಟು ಹೆಚ್ಚಳ ಮಾಡಲಾಗಿದೆ. ಇದರಿಂದ ಪ್ರತಿದಿನ ಸುಮಾರು 10 ಲಕ್ಷ ಪ್ರಯಾಣಿಕರಿಗೆ, ವಿಶೇಷವಾಗಿ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಮತ್ತು ಐಟಿ-ಬಿಟಿ ನೌಕರರಿಗೆ ಭಾರೀ ಹೊರೆ ಉಂಟಾಗಿದೆ.

    ದಿನನಿತ್ಯ 10 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು, ಮುಖ್ಯವಾಗಿ ವಿದ್ಯಾರ್ಥಿಗಳು, ಕಾರ್ಮಿಕರು, ಮತ್ತು ಐಟಿ ವಲಯದ ಉದ್ಯೋಗಿಗಳು ಮೆಟ್ರೋ ಬಳಸುತ್ತಿದ್ದು, ಈ ದರ ಏರಿಕೆಯಿಂದ ಅವರಿಗೆ ಭಾರೀ ಆರ್ಥಿಕ ಹೊರೆಯಾಗಿದೆ.

    25 ಕಿ.ಮೀ. ಗಿಂತ ಹೆಚ್ಚು ದೂರ ಪ್ರಯಾಣಿಸುವವರು ಪ್ರತಿ ಪ್ರಯಾಣಕ್ಕೆ ₹90 ಪಾವತಿಸಬೇಕಾಗುತ್ತದೆ. ಉದಾಹರಣೆಗೆ, ವಿಜಯನಗರದಿಂದ ವೈಟ್‌ಫೀಲ್ಡ್‌ಗೆ ಹೋಗಲು ₹90 ಹಾಗೂ ವಾಪಸ್ ಬರಲು ಮತ್ತೊಂದು ₹90, ಅಂದರೆ ಪ್ರತಿದಿನ ಕನಿಷ್ಠ ₹180 ವೆಚ್ಚವಾಗುತ್ತದೆ. ಇದಕ್ಕೆ ಮೆಟ್ರೋ ತಲುಪಲು ಅಥವಾ ಮನೆಗೆ ಹಿಂತಿರುಗಲು ಬೇಕಾಗುವ ಬಸ್/ಕ್ಯಾಬ್‌ ಖರ್ಚು ಸೇರಿಲ್ಲವೆಂದು ಅವರು ತಿಳಿಸಿದರು.

    ಈ ದರ ಏರಿಕೆಗೆ ಸಂಬಂಧಿಸಿದಂತೆ ಶುಲ್ಕ ನಿಗದಿ ಸಮಿತಿ (FFC) ವರದಿಯನ್ನು ಸರ್ಕಾರ ತಕ್ಷಣವೇ ಸಾರ್ವಜನಿಕಗೊಳಿಸಬೇಕು ಎಂದು ತೇಜಸ್ವಿ ಸೂರ್ಯ ಒತ್ತಾಯಿಸಿದ್ದಾರೆ. ಈ ಸಂಬಂಧವಾಗಿ ಅವರು ಈಗಾಗಲೇ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು, ಸೆಪ್ಟೆಂಬರ್ 22ರಂದು ಅಂತಿಮ ವಿಚಾರಣೆ ನಡೆಯಲಿದೆ. ಸಾರ್ವಜನಿಕ ಹಿತಾಸಕ್ತಿ ಮುಖ್ಯ. ಆದ್ದರಿಂದ ವರದಿ ಬಹಿರಂಗಪಡಿಸಿ, ದರ ಇಳಿಕೆ ಮಾಡಿ ಜನರಿಗೆ ತಕ್ಷಣದ ಪರಿಹಾರ ಒದಗಿಸಬೇಕು,” ಎಂದು ಅವರು ಆಗ್ರಹಿಸಿದ್ದಾರೆ.

    ಭಾರತಕ್ಕೆ ಎಂಟ್ರಿ ಕೊಟ್ಟ ಮೊದಲ ಟೆಸ್ಲಾ ಕಾರು: ‘ಮಾಡಲ್ ವೈ’ ಖರೀದಿಸಿದ ಮಹಾರಾಷ್ಟ್ರ ಸಚಿವರು!


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading