Thursday, September 3, 2026
spot_img
More
    spot_img
    HomeLatest newsಕಾಂಗ್ರೆಸ್ ಮಕ್ಕಳು ತಿನ್ನುವ ಚಾಕೊಲೇಟ್‌ಗಳ ಮೇಲೂ ತೆರಿಗೆ ಹಾಕಿತ್ತು- ಮೋದಿ

    ಕಾಂಗ್ರೆಸ್ ಮಕ್ಕಳು ತಿನ್ನುವ ಚಾಕೊಲೇಟ್‌ಗಳ ಮೇಲೂ ತೆರಿಗೆ ಹಾಕಿತ್ತು- ಮೋದಿ

    ಸರಕು ಮತ್ತು ಸೇವಾ ತೆರಿಗೆಯ (ಜಿಎಸ್‌ಟಿ)  ಹೊಸ ನೀತಿಯ ನಂತರ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ , ಕಾಂಗ್ರೆಸ್ ಆಡಳಿತದಲ್ಲಿ ದಿನಬಳಕೆಯ ವಸ್ತುಗಳು, ಆಹಾರ ಮತ್ತು ಔಷಧಿಗಳಂತಹ ಪ್ರತಿಯೊಂದಕ್ಕೂ ತೆರಿಗೆ ವಿಧಿಸಲಾಗಿತ್ತು ಎಂದು ಹೇಳಿದ್ದಾರೆ. ವಿರೋಧ ಪಕ್ಷ ಕಾಂಗ್ರೆಸ್ ವಿರುದ್ಧ ಮಾತನಾಡಿದ್ದಾರೆ.

    Advertisement

    ಹೊಸ ಪೀಳಿಗೆಯ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ 2.0) ಸುಧಾರಣೆ ಭಾರತದ ಆರ್ಥಿಕ ಬೆಳವಣಿಗೆಗೆ ಎರಡು ಪಟ್ಟು ವೇಗ ನೀಡಲಿದೆ. ಜನರ ಮೇಲಿನ ಹೊರೆ ಕಡಿಮೆ ಮಾಡುವ ಜತೆಗೆ ಉದ್ಯಮದ ಬೆಳವಣಿಗೆಗೆ ಬೆಂಬಲ ನೀಡಲಿದೆ, ಈ ದೀಪಾವಳಿಯು ದೇಶದ ಜನರಿಗೆ ಡಬಲ್ ಧಮಾಕಾ ತರಲಿದೆ ಎಂದು ನಾನು ಭರವಸೆ ನೀಡಿದ್ದೆ. ನವರಾತ್ರಿಯ ಮೊದಲ ದಿನದಿಂದಲೇ ಜನರಿಗೆ ಇದರ ಪ್ರಯೋಜನಗಳು ಲಭ್ಯವಾಗಲಿವೆ. ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಜಿಎಸ್‌ಟಿ ಮಂಡಳಿಯು ನಿನ್ನೆ ಘೋಷಿಸಿದ ತೆರಿಗೆ ದರಗಳ ಸರಳೀಕರಣದ ಅಡಿಯಲ್ಲಿ, ಆಹಾರ, ಔಷಧಿಗಳು, ಅಗತ್ಯ ವಸ್ತುಗಳು, ಕೃಷಿ ಉತ್ಪನ್ನಗಳು, ಹಸಿರು ಇಂಧನ, ಸಣ್ಣ ಕಾರುಗಳು ಮತ್ತು ಬೈಕ್‌ಗಳು ಸೇರಿದಂತೆ ಅನೇಕ ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲಾಗಿದೆ ಎಂದು ಮೋದಿ ಹೇಳಿದ್ದಾರೆ.

    ಕಾಂಗ್ರೆಸ್ ಮಕ್ಕಳು ತಿನ್ನುವ ಚಾಕೊಲೇಟ್‌ಗಳ ಮೇಲೂ ತೆರಿಗೆ ಹಾಕಿತ್ತು, ಎಂದು ಪ್ರಧಾನಿ ಹೇಳಿದರು. ಸ್ವಾತಂತ್ರ್ಯ ಬಂದಾಗಿನಿಂದ ಹಲವು ಹಂತದ ತೆರಿಗೆಯಿಂದ ಜನತೆ ಹೈರಾಣಾಗಿದ್ದರು. ನಮ್ಮ ಸರಕಾರ 2017ರಲ್ಲಿ ಜಿಎಸ್‌ಟಿ ತರುವ ಮೂಲಕ ಸುಧಾರಣೆ ಹಾದಿಗೆ ನಾಂದಿ ಹಾಡಿತು. ಹೊಸ ಪೀಳಿಗೆ ಸುಧಾರಣೆ ಮೂಲಕ ಮತ್ತಷ್ಟು ಸರಳಗೊಳಿಸಲಾಗಿದೆ. ಎಂದು ಮೋದಿ ಹೇಳಿದರು.

    ಸಾಮಾನ್ಯ ಜನರ ಜೇಬಿನಿಂದ ಸ್ವಲ್ಪ ಹೊರೆಯನ್ನು ಇಳಿಸುವ ಉದ್ದೇಶದಿಂದ, ಕೇಂದ್ರ ಸರ್ಕಾರವು ಆಹಾರ ವಸ್ತುಗಳು ಮತ್ತು ದಿನನಿತ್ಯದ ವಸ್ತುಗಳ ಮೇಲಿನ ಪರೋಕ್ಷ ತೆರಿಗೆಗಳನ್ನು ಕಡಿತಗೊಳಿಸಿದೆ. ಬುಧವಾರ (ಸೆಪ್ಟೆಂಬರ್ 3) ನಡೆದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿಯ 56 ನೇ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

    ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ 10 ಗಂಟೆಗಳ ಕಾಲ ನಡೆದ ಸಭೆಯಲ್ಲಿ, ಜಿಎಸ್‌ಟಿ ಮಂಡಳಿಯು ಅಸ್ತಿತ್ವದಲ್ಲಿರುವ ನಾಲ್ಕು ಹಂತದ ತೆರಿಗೆ ರಚನೆಯಾದ 5%, 12%, 18% ಮತ್ತು 28% ಅನ್ನು ಸರ್ವಾನುಮತದಿಂದ ಪರಿಷ್ಕರಿಸಿತು ಮತ್ತು 12% ಮತ್ತು 28% ತೆರಿಗೆ ವರ್ಗಗಳನ್ನು ತೆಗೆದುಹಾಕಿತು.

    ಹೊಸ ಪರೋಕ್ಷ ತೆರಿಗೆ ವ್ಯವಸ್ಥೆಯು 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್‌ಗಳನ್ನು ಮಾತ್ರ ಹೊಂದಿರುತ್ತದೆ, ಇದು ಸೆಪ್ಟೆಂಬರ್ 22, ನವರಾತ್ರಿಯ ಮೊದಲ ದಿನದಿಂದ ಜಾರಿಗೆ ಬರುತ್ತದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading