Saturday, August 8, 2026
spot_img
More
    spot_img
    HomeBreaking Newsಪಾದಚಾರಿ ಮಾರ್ಗದಲ್ಲಿ  ಮಲಗಿ ಪ್ರತಿಭಟನೆ ಮಾಡುತ್ತಿರುವ TCS ಉದ್ಯೋಗಿ! ಕಾರಣವೇನು‌?

    ಪಾದಚಾರಿ ಮಾರ್ಗದಲ್ಲಿ  ಮಲಗಿ ಪ್ರತಿಭಟನೆ ಮಾಡುತ್ತಿರುವ TCS ಉದ್ಯೋಗಿ! ಕಾರಣವೇನು‌?

    ಸರಿಯಾಗಿ ಸಂಬಳ ನೀಡಿಲ್ಲವೆಂಬ ಕಾರಣ ನೀಡಿ ಮಹಾರಾಷ್ಟ್ರದ ಪುಣೆ ನಗರದಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್‌ (ಟಿಸಿಎಸ್‌) ಕಚೇರಿಯ ಹೊರಭಾಗದ ಪಾದಚಾರಿ ಮಾರ್ಗದಲ್ಲಿ ಉದ್ಯೋಗಿಯೊಬ್ಬರು ಮಲಗಿ ಪ್ರತಿಭಟನೆ ನಡೆಸುತ್ತಿರುವ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ.

    Advertisement

    ಭಾರತದ ಅತಿದೊಡ್ಡ ಮಾಹಿತಿ ತಂತ್ರಜ್ಞಾನ ಸಂಸ್ಥೆ ಟಿಸಿಎಸ್ (ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್) 12,200 ಉದ್ಯೋಗಗಳನ್ನು ಕಡಿತಗೊಳಿಸಿದೆ. ಲೇ ಆಫ್‌ಗೆ ಒಳಗಾದ ಸೌರಬ್‌ ಎನ್ನುವ ಉದ್ಯೋಗಿಯೊಬ್ಬರು ಪುಣೆಯ ಕಚೇರಿ ಮುಂದೆ..ಸಂಬಳಕ್ಕಾಗಿ ಕಾಯುತ್ತಾ, ರಾತ್ರಿ ಚಳಿ ಮುಂಜಾನೆ ಬಿಸಿಲು ಏನನ್ನು ಲೆಕ್ಕಿಸದೆ ಪ್ರತಿಭಟಿಸುತ್ತಿದ್ದಾರೆ.

    ಆತನ ಹೇಳಿಕ ಇರುವ ಪತ್ರವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಈ ಪತ್ರದಲ್ಲಿ ‘ಜುಲೈ 29ರಂದು ಕಚೇರಿಗೆ ವಾಪಸ್ಸಾಗಿದ್ದೇನೆ. ಆದರೆ ಇನ್ನೂ ಅವರ ಐಡಿ (ಗುರುತಿನ ಚೀಟಿ) ಸಕ್ರಿಯವಾಗಿಲ್ಲ. ಅಲ್ಲದೆ ಜುಲೈ 31ರಂದು ಬರಬೇಕಾದ ಸಂಬಳ ಕೂಡ ಇದುವರೆಗೆ ಬಂದಿಲ್ಲ’ ಎಂದು ಬರೆದುಕೊಂಡಿದ್ದಾರೆ.
    ಮುಂದುವರಿದು, ‘ಸಭೆಯ ವೇಳೆ ಎಚ್‌ಆರ್‌ ವಿಭಾಗಕ್ಕೆ ನನ್ನ ಬಳಿ ಹಣವಿಲ್ಲ, ಹೀಗಾಗಿ ಅನಿವಾರ್ಯವಾಗಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದೇನೆ ಎಂದು ಹೇಳಿದ್ದೇನೆ, ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ಬರೆದುಕೊಂಡಿದ್ದಾರೆ.

    ‘ಸಭೆಯ ವೇಳೆ ಎಚ್‌ಆರ್‌ ವಿಭಾಗಕ್ಕೆ ನನ್ನ ಬಳಿ ಹಣವಿಲ್ಲ, ಹೀಗಾಗಿ ಅನಿವಾರ್ಯವಾಗಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದೇನೆ ಎಂದು ಹೇಳಿದ್ದೇನೆ, ಆದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ’ ಎಂದು ಬರೆದುಕೊಂಡಿದ್ದಾರೆ.

    ಉದ್ಯೋಗಿಯ ಪೋಸ್ಟ್‌ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ಎಚ್ಚೆತ್ತ ಟಿಸಿಎಸ್‌, ಪ್ರತಿಕ್ರಿಯೆ ನೀಡಿದ್ದು, ‘ಉದ್ಯೋಗಿಯು ಮಾಹಿತಿ ನೀಡದೆ ರಜೆ ತೆಗೆದುಕೊಂಡಿದ್ದರು. ಇದನ್ನು ‘ಅನಧಿಕೃತ ಗೈರು ಹಾಜರಾತಿ’ ಎಂದು ಪರಿಗಣಿಸಿಲಾಗಿದ್ದು, ಅದಕ್ಕೆ ತಕ್ಕ ಹಾಗೆ ಅವರ ಹಾಜರಾತಿ ಇಲ್ಲದ ದಿನಗಳ ಸಂಬಳ ಕಡಿತಗೊಂಡಿದೆ. ಉದ್ಯೋಗಿ ಕೆಲಸಕ್ಕೆ ವಾಪಸ್ಸಾದ ಬಳಿಕ ಅವರು ಮನವಿಯನ್ನು ಸ್ವೀಕರಿಸಿದ್ದು, ವಸತಿ ವ್ಯವಸ್ಥೆಯನ್ನು ನೀಡಲಾಗಿದೆ. ಈ ಸಮಸ್ಯೆಯನ್ನು ಪರಿಹರಿಸಲಾಗುತ್ತಿದೆ’ ಎಂದು ಹೇಳಿದೆ.

    ,


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading