ಹೊಸದಿಲ್ಲಿ: ದೆಹಲಿ, ಉತ್ತರಪ್ರದೇಶ, ಬಿಹಾರ ಸಹಿತ ಉತ್ತರ ಹಾಗೂ ಈಶಾನ್ಯ ಭಾರತದಲ್ಲಿ ಮುಂದಿನ 3 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಂಗಳವಾರ ಮುನ್ಸೂಚನೆ ನೀಡಿದೆ.
ಮುಂಗಾರು ಚುರುಕಾಗಿ ದೇಶಾದ್ಯಂತ ಧಾರಾಕಾರ ಮಳೆಯಾಗಿದ್ದು ಕೆಲವು ದಿನ ಮುಂದುವರಿಯಲಿದೆ ಎಂದು ಐಎಂಡಿ ಹೇಳಿದೆ. ದೆಹಲಿ-ಎನ್ಸಿಆರ್ನಲ್ಲಿ ಮಂಗಳವಾರದಿಂದ ಗುರುವಾರದವರೆಗೆ ಕುಂಭದ್ರೋಣ ಮಳೆಯಾಗಲಿದೆ.
ಆ.10ರ ವರೆಗೆ ಪಶ್ಚಿಮ ಬಂಗಾಳ, ಮೇಘಾಲಯದಲ್ಲೂ ಭಾರಿ ಮಳೆಯಾಗಲಿದೆ. ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿರುವ ಹಿಮಾಚಲಪ್ರದೇಶದಲ್ಲಿ ರಸ್ತೆಗಳು ಹದಗೆಟ್ಟಿರುವುದರಿಂದ ಸಂಚಾರಯೋಗ್ಯವಲ್ಲದ 451 ರಸ್ತೆಗಳನ್ನು ಬಂದ್ ಮಾಡಲಾಗಿದೆ. ಅವುಗಳಲ್ಲಿ 4 ಹೆದ್ದಾರಿಗಳೂ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಳೆ ಆರ್ಭಟ ಜೋರಾಗಿದ್ದು ಕೇರಳ-ತಮಿಳುನಾಡು ಗುಡ್ಡಗಾಡು ಪ್ರದೇಶಗಳಲ್ಲಿ ಬುಧವಾರದವರೆಗೆ ಜಾಸ್ತಿ ಮಳೆ ಆಗಲಿದೆ. ಕೇರಳದ ನದಿ ಅಣಿಕಟ್ಟುಗಳು ತುಂಬಿದ್ದು 4 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕೇರಳ ಮತ್ತು ಬಂಗಾಳ ಕೊಲ್ಲಿಯಿಂದ ಹಿಡಿದು ತಮಿಳುನಾಡು ಕರಾವಳಿವರೆಗೆ ಚಂಡಮಾರುತದ ಪರಿಸ್ಥಿತಿ ಸೃಷ್ಟಿ ಆಗಿರುವುದು ಹವಾಮಾನ ತೀವ್ರತೆಗೆ ಕಾರಣವೆಂದು ಐಎಂಡಿ ಹೇಳಿದೆ.
ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: ಕಲ್ಲು ತೂರಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೊ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


