Wednesday, August 5, 2026
spot_img
More
    spot_img
    HomeLatest newsಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ ಎಂದ ಮತ್ತೋರ್ವ ಕಾಂಗ್ರೆಸ್ಸಿಗ

    ಕೆಆರ್‌ಎಸ್ ಅಣೆಕಟ್ಟು ನಿರ್ಮಾಣಕ್ಕೆ ಟಿಪ್ಪು ಅಡಿಗಲ್ಲು ಇಟ್ಟಿದ್ದು ಸತ್ಯ ಎಂದ ಮತ್ತೋರ್ವ ಕಾಂಗ್ರೆಸ್ಸಿಗ

    ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ.

    Advertisement

    ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರರಷ್ಟು ಸತ್ಯ.
    ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು ಸುಲ್ತಾನ್.‌ ಮೋವಿ ಡ್ಯಾಂ ಎಂದು ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್.ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೇ ಕೆಆರ್‌ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಕೂಡ ಇದೆ. ನಾಲ್ವಡಿಗೂ ಹಾಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ.‌ ಇವರು ರಾಜಕಾರಣಕ್ಕಾಗಿ ಬಂದವರು ಎಂದು ಸಂಸದ ಯದುವೀರ್‌ ಒಡೆಯರ್‌ಗೆ ಟಾಂಗ್‌ ಕೊಟ್ಟರು.

    ಇನ್ನು ನಾಲ್ವಡಿಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಹಾಗೂ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆಯನ್ನೂ ಸಮರ್ಥಿಸಿಕೊಂಡ ಅವರು, ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ, ‌ಆಸ್ಪತ್ರೆ ಕಟ್ಟಿಸಿದ್ದಾರೆ, ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ ಸಿದ್ದರಾಮಯ್ಯ ಮೈಸೂರಿಗೆ ಅತೀಹೆಚ್ಚು ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.

    ಇನ್ನು ಸಂಸತ್‌ನಲ್ಲಿ ನಡೆದ ಸ್ಮೋಕ್ ಬಾಂಬ್ ಘಟನೆಯಲ್ಲಿ ಪೊಲೀಸರು ಪ್ರತಾಪ್ ಸಿಂಹ ಮೊಬೈಲ್ ಜಪ್ತಿ ಮಾಡಿದ್ದರು. ಆ ಮೊಬೈಲ್ ಬಗ್ಗೆ ಎಸ್ಐಟಿಗೆ ತನಿಖೆ ನಡೆಸಲು ಕೊಟ್ಟರೆ ಪ್ರಜ್ವಲ್ ರೇವಣ್ಣ ಒಳಗೆ ಹೋದಂತೆ ಪ್ರತಾಪ್ ಸಿಂಹ ಕೂಡ ಒಳಗೆ ಹೋಗುತ್ತಾರೆ. ನನ್ನ ಬಳಿಯೂ ಈ ಬಗ್ಗೆ ಆಧಾರಗಳಿವೆ. ಅವರ ಮೊಬೈಲ್‌ನಲ್ಲಿ ನಗ್ನ ಚಿತ್ರಗಳು, ನಗ್ನ ವಿಡಿಯೋ ಇವೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ದ ಗಂಭೀರ ಆರೋಪ ಮಾಡಿದರು.

    ಆರ್‌ಬಿಐ : ಸಾಲಗಾರರಿಗೆ ಶುಭ ಸುದ್ದಿ RBI ರೆಪೋ ದರ ಯಥಾಸ್ಥಿತಿ 5.5% ಮುಂದುವರಿಕೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading