ದಕ್ಷಿಣ ಕನ್ನಡ: ಧರ್ಮಸ್ಥಳ ಸರಣಿ ಕೊಲೆ, ಅತ್ಯಾಚಾರ ಕೊಲೆಗಳ ದೂರು ನೀಡಿದ್ದ ಅನಾಮಿಕ ವ್ಯಕ್ತಿ ತಾನೇ ಹಲವಾರು ಹೆಣಗಳನ್ನು ಹೂತಿದ್ದಾಗಿ ಹೇಳಿಕೊಂಡಿದ್ದ.
ಆರಂಭದಲ್ಲಿ ಈತನ ದೂರಿಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ಆದರೆ ಆತ ದೂರಿನಲ್ಲಿ ಹೆಣ ಹೂತಿದ್ದ ಜಾಗಗಳನ್ನು ತಾನು ತೋರಿಸಲು ಸಿದ್ಧನಿರುವುದಾಗಿ ತಿಳಿಸಿದ ಕಾರಣ ಪ್ರಕರಣ ಗಂಭೀರ ಸ್ವರೂಪವನ್ನು ಪಡೆದುಕೊಂಡಿತು.
ಮಹಿಳೆಯರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂಬ ಆರೋಪವಿದ್ದ ಕಾರಣ ಮಹಿಳಾ ಆಯೋಗ ಆರೋಪವನ್ನು ಗಂಭೀರವಾಗಿ ಪರಿಗಣಿಸಿತು. ಪರಿಣಾಮ ರಾಜ್ಯ ಸರ್ಕಾರ ಎಸ್ಐಟಿ ರಚಿಸಿ ತನಿಖೆ ನಡೆಸಲು ಆದೇಶಿಸಿತು.
ಅದರಂತೆ ಸದ್ಯ ತನಿಖೆ ನಡೆಯುತ್ತಿದ್ದು, ಅನಾಮಿಕ 13 ಸ್ಥಳಗಳನ್ನು ಗುರುತಿಸಿ ಉತ್ಖನನ ಕಾರ್ಯ ಚಾಲ್ತಿಯಲ್ಲಿದೆ. ಪಾಯಿಂಟ್ 6ರಲ್ಲಿ ಅಸ್ತಿಪಂಜರ ಪತ್ತೆಯಾಗಿದ್ದು, ಪಾಯಿಂಟ್ 11ರ ಪಕ್ಕದಲ್ಲಿದ್ದ ಬಂಗ್ಲ ಗುಡ್ಡದಲ್ಲಿ ಮೂರು ಅಸ್ತಿಪಂಜರಗಳು ಪತ್ತೆಯಾಗಿವೆ.
ಹೀಗೆ ಅಸ್ತಿಪಂಜರ ಸಿಕ್ಕ ಬಳಿಕ ಅನಾಮಿಕನತ್ತ ಎಲ್ಲರ ಚಿತ್ತ ನೆಟ್ಟಿದ್ದು, ಇದೀಗ ಮತ್ತೋರ್ವ ಅನಾಮಿಕ ಸಾಕ್ಷಿ ದೂರುದಾರನಿಗೆ ಹೆಣ ಹೂಳಲು ಸಹಾಯ ಮಾಡಿದ್ದೆ ಎಂದು ಎಸ್ಐಟಿ ಅಧಿಕಾರಿಗಳ ಮುಂದೆ ಬಂದಿದ್ದಾನೆ.
ಈತನನ್ನೂ ಸಹ ತನಿಖಾ ಸ್ಥಳಕ್ಕೆ ಕರೆಸಿಕೊಂಡಿರುವ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
ಧರ್ಮಸ್ಥಳ: ಮತ್ತೆ ಎಸ್ಐಟಿ ಅಧಿಕಾರಿಗಳನ್ನು ಗುಡ್ಡ ಹತ್ತಿಸಿದ ಅನಾಮಿಕ; ಇಂದು ಎಷ್ಟು ಅಸ್ತಿಪಂಜರ?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


