Friday, September 18, 2026
spot_img
More
    spot_img
    HomeStateDistrictಶಿವಮೊಗ್ಗ: ಒಂದೇ ಮನೆಯಲ್ಲಿ ತಾಯಿ, ಮಗ ನೇಣಿಗೆ ಶರಣು; ಈ ಹಿಂದೆ ಮಾವ, ಸೊಸೆಯೂ ಇದೇ...

    ಶಿವಮೊಗ್ಗ: ಒಂದೇ ಮನೆಯಲ್ಲಿ ತಾಯಿ, ಮಗ ನೇಣಿಗೆ ಶರಣು; ಈ ಹಿಂದೆ ಮಾವ, ಸೊಸೆಯೂ ಇದೇ ಮನೆಯಲ್ಲಿ ಆತ್ಮಹತ್ಯೆ

    ಶಿವಮೊಗ್ಗ: ನಗರದ ಜನಪ್ರಿಯ ಸ್ತ್ರೀರೋಗ ತಜ್ಞೆ ಜಯಶ್ರೀ ಹೊಮ್ಮರಡಿ ಹಾಗೂ ಅವರ ಪುತ್ರ ಆಕಾಶ್ ಹೊಮ್ಮರಡಿ ಒಂದೇ ದಿನ ಆತ್ಮಹತ್ಯೆಗೆ ಶರಣಾಗಿದ್ದಾರೆ.

    Advertisement

    ನಗರದ ಅಶ್ವತ್ಥ್ ಬಡಾವಣೆಯಲ್ಲಿ ತಾಯಿ, ಮಗ ಹಾಗೂ ಸೊಸೆ ವಾಸವಿದ್ದು, 57 ವರ್ಷದ ಜಯಶ್ರೀ ಮೊದಲಿಗೆ ಕೆಳಮಹಡಿಯ ತಮ್ಮ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾದರೆ, ಮಗ ಆಕಾಶ್ ಮೇಲಿನ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

    ಇನ್ನು ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಹಣಕಾಸು ವಿಷಯಕ್ಕೆ ತಾಯಿ ಹಾಗೂ ಮಗನ ನಡುವೆ ಆಗಾಗ ಜಗಳಗಳು ನಡೆಯುತ್ತಿದ್ದವು ಎಂದು ಹೇಳಲಾಗಿದ್ದು, ಇದೇ ಕಾರಣಕ್ಕೆ ಈ ದುರ್ಘಟನೆ ನಡೆದಿರಬಹುದು ಎಂಬ ಶಂಕೆ ಇದೆ.

    ಅಲ್ಲದೇ ಇದೇ ಮನೆಯಲ್ಲಿ ಹತ್ತು ವರ್ಷಗಳ ಹಿಂದೆ ಜಯಶ್ರೀ ಹೊಮ್ಮರಡಿ ಪತಿ, ಮಕ್ಕಳ ತಜ್ಞ ನಾಗರಾಜ ಹೊಮ್ಮರಡಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂದೂವರೆ ವರ್ಷದ ಹಿಂದೆ ಆಕಾಶ್‌ ಮೊದಲ ಪತ್ನಿ ಸಹ ಆತ್ಮಹತ್ಯೆಗೆ ಶರಣಾಗಿದ್ದರು.

    ಮೊದಲ ಪತ್ನಿ ಆತ್ಮಹತ್ಯೆ ಮಾಡಿಕೊಂಡ ಬಳಿಕ ಆಕಾಶ್‌ಗೆ ಈ ವರ್ಷದ ಮೇ ತಿಂಗಳಿನಲ್ಲಿ ಎರಡನೇ ವಿವಾಹ ಮಾಡಲಾಗಿತ್ತು. ಆದರೆ ಮದುವೆಯಾದ ಆರೇ ತಿಂಗಳಿಗೆ ಆಕಾಶ್ ತನ್ನ ಎರಡನೇ ಪತ್ನಿ ಮನೆಯಲ್ಲಿರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ನೆರೆಹೊರೆಯ ಜನರು ಹಲವು ಎಕರೆ ಜಾಗ ಹಾಗೂ ಮನೆಯ ಆಸ್ತಿಗಳನ್ನು ಹೊಂದಿರುವ ಕುಟುಂಬ ಹಣಕಾಸು ಸಮಸ್ಯೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ಕಷ್ಟ ಎಂದಿದ್ದಾರೆ. ಅಲ್ಲದೇ ಮೊದಲ ಪತ್ನಿಯ ಸಾವಿನ ಖಿನ್ನತೆ ಕುಟುಂಬಕ್ಕೆ ಕಾಡುತ್ತಿತ್ತು. ಇದೇ ಕಾರಣದಿಂದ ಆತ್ಮಹತ್ಯೆ ನಡೆದಿರಬಹುದಾ ಎಂಬ ಪ್ರಶ್ನೆ ಸಹ ಎದ್ದಿದೆ. ಡೆತ್‌ನೋಟ್‌ನಲ್ಲಿರುವ ಅಂಶ ಹಾಗೂ ಮರಣೋತ್ತರ ಪರೀಕ್ಷೆಯ ನಂತರ ಸಾವಿನ ಬಗ್ಗೆ ನಿಖರ ಕಾರಣ ಏನೆಂಬುದು ತಿಳಿದುಬರಲಿದೆ.

    Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821

    ‘ರಾಜೀನಾಮೆ ನೀಡುತ್ತೇನೆ, ನೀವು ನೀಡ್ತೀರಾ?’; ಬಿಜೆಪಿಗರಿಗೆ ಸವಾಲೆಸೆದ ಡಿಕೆಶಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading