Monday, August 31, 2026
spot_img
More
    spot_img
    HomeLatest newsನಾಳೆ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ

    ನಾಳೆ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ

    ನವದೆಹಲಿ: ಜಿದ್ದಾಜಿದ್ದಿನ ಕಣವಾಗಿರುವ ರಾಷ್ಟ್ರ ರಾಜಧಾನಿ ನವದೆಹಲಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ ನಾಳೆ (ಫೆಬ್ರವರಿ 8) ಪ್ರಕಟವಾಗಲಿದೆ.

    Advertisement


    ಬೆಳಿಗ್ಗೆ 8 ಗಂಟೆಗೆ ಒಟ್ಟು 19 ಮತಕೇಂದ್ರಗಳಲ್ಲಿ ಎಣಿಕೆ ಆರಂಭವಾಗಲಿದ್ದು, ಬಹುತೇಕ ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.
    ಮತ ಎಣಿಕೆಗೆ ಚುನಾವಣಾ ಆಯೋಗ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದು, ಮತಕೇಂದ್ರಕ್ಕೆ ಅಭ್ಯರ್ಥಿಗಳ ಏಜೆಂಟರು ಹೊರತುಪಡಿಸಿ ಬೇರೆಯವರು ಮತಕೇಂದ್ರದಿಂದ ಆಚೆ ಇರಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.


    ಮತಎಣಿಕೆ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಹಾಕಲಾಗಿದ್ದು, ಅನಗತ್ಯವಾಗಿ ಒಳಗೆ ಬರುವುದು ಇಲ್ಲವೇ ಎಣಿಕೆ ಕೇಂದ್ರದ ಬಳಿ ಗುಂಪುಗೂಡುವುದನ್ನು ಆಯೋಗ ನಿಷೇಧ ಮಾಡಿದೆ.


    ಮತಗಳ ಎಣಿಕೆ ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಆಯೋಗವು ಕೆಲವು ಶಾಲೆಗಳಿಗೆ ಮಾತ್ರ ರಜೆಯನ್ನು ಘೋಷಣೆ ಮಾಡಿದೆ. ಉಳಿದಂತೆ ಅನ್ಯ ಕಚೇರಿಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಸ್ಪಷ್ಟಪಡಿಸಿದೆ.


    2015 ಮತ್ತು 2020 ರಲ್ಲಿ ಅಭೂತಪೂರ್ವ ಜನಾದೇಶ ಪಡೆದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷವನ್ನು ಧೂಳೀಪಟ ಮಾಡಿದ್ದ ಆಮ್ ಆದ್ಮಿ ಈ ಬಾರಿ ಅ?ಕಾರ ಕಳೆದುಕೊಳ್ಳುವ ಸಾಧ್ಯತೆಯಿದೆ ಎಂದು ಮತಗಟ್ಟೆ ಸಮೀಕ್ಷೆಗಳು ಭವಿಷ್ಯ ನುಡಿದಿದೆ.


    ಮತದಾನ ನಡೆದ ನಂತರ ಸುಮಾರು 12 ಖಾಸಗಿ ಏಜೆನ್ಸಿಗಳು ನಡೆಸಿರುವ ಸಮೀಕ್ಷೆ ಪ್ರಕಾರ, 10 ಏಜೆನ್ಸಿಗಳು ಬಿಜೆಪಿ ಅಧಿಕಾರಕ್ಕೆ ಮರಳಲಿದೆ ಎಂದು ಹೇಳಿದರೆ ಎರಡು ಸಮೀಕ್ಷೆಗಳು ಮಾತ್ರ ಎಎಪಿ ಪುನಃ ಅ?ಕಾರ ಹಿಡಿಯಲಿದೆ ಎಂದು ಹೇಳಿವೆ.


    27 ವರ್ಷಗಳ ನಂತರ ದೆಹಲಿಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಗದ್ದುಗೆ ಹಿಡಿಯಲೇಬೇಕೆಂದು ಪಣ ತೊಟ್ಟಿರುವ ಬಿಜೆಪಿ ಗೆಲ್ಲಲು ಬೇಕಾದ ಎಲ್ಲಾ ರಣತಂತ್ರಗಳನ್ನು ರೂಪಿಸಿತ್ತು.


    ಸುಮಾರು 50 ಸಾವಿರಕ್ಕೂ ಹೆಚ್ಚು ಆರೆಸ್‍ಎಸ್‍ನ ಕಾರ್ಯಕರ್ತರು ಕಳೆದ ಆರು ತಿಂಗಳಿನಿಂದ ಬಿಜೆಪಿ ಪರವಾಗಿ ಕೆಲಸ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಅಲೆ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಪ್ರಚಾರ ನಡೆಸಿತ್ತು.ಎಎಪಿಯ ಭ್ರಷ್ಟಾಚಾರ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್, ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಜೈಲಿಗೆ ಹೋಗಿದ್ದು ಸಾಲುಸಾಲು ಸಚಿವರ ಭ್ರಷ್ಟಾಚಾರ ಸ್ವತಃ ಕೇಜ್ರಿವಾಲ್‍ರವರ ಭವ್ಯ ಮನೆ ನಿರ್ಮಾಣ ವಿವಾದಕ್ಕೆ ಕಾರಣವಾಗಿತ್ತು.


    ಇದರ ನಡುವೆಯೂ ಎಎಪಿ ಕಳೆದ ಎರಡು ಅವಧಿಯಲ್ಲಿ ದೆಹಲಿ ಜನರಿಗೆ ಮಾಡಿದ ಸಾಧನೆಗಳನ್ನೇ ಮುಂದಿಟ್ಟುಕೊಂಡು ಪ್ರಚಾರ ನಡೆಸಿತ್ತು. ದೆಹಲಿಯಲ್ಲಿ ಒಟ್ಟು 70 ವಿಧಾನಸಭಾ ಕ್ಷೇತ್ರಗಳಿದ್ದು, ಸರಳ ಬಹುಮತಕ್ಕೆ 36 ಸ್ಥಾನಗಳ ಅವಶ್ಯಕತೆಯಿದೆ.ಮತದಾರರ ನಾಡಿಮಿಡಿತ ಏನೆಂಬುದು ಇಂದು ಫಲಿತಾಂಶದಿಂದಲೇ ಸ್ಪಷ್ಟವಾಗಲಿದೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading