Tuesday, September 1, 2026
spot_img
More
    spot_img
    HomeTop Storyಮುಡಾ ಪ್ರಕರಣ: ಕೋರ್ಟ್‌ ಆದೇಶ ಹೊರಬೀಳುತ್ತಿದ್ದಂತೆ ಸಿದ್ದರಾಮಯ್ಯ ಸಂತಸ

    ಮುಡಾ ಪ್ರಕರಣ: ಕೋರ್ಟ್‌ ಆದೇಶ ಹೊರಬೀಳುತ್ತಿದ್ದಂತೆ ಸಿದ್ದರಾಮಯ್ಯ ಸಂತಸ

    ಬೆಂಗಳೂರು: ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಸಿಬಿಐ ತನಿಖೆ ಅರ್ಜಿ ನಿರಾಕರಿಸಿ ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸತಗೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರೂ ಆಗಿರುವ ಶಾಸಕ ಎ.ಎಸ್.ಪೊನ್ನಣ್ಣ ತಿಳಿಸಿದ್ದಾರೆ.

    Advertisement


    ಗೃಹಕಚೇರಿ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮೂರು ವಿಚಾರಗಳನ್ನು ಪ್ರಸ್ತಾಪಿಸಿದ್ದರು. ಲೋಕಾಯುಕ್ತ ಸಂಸ್ಥೆಯ ಸ್ವಾತಂತ್ರ್ಯದ ಬಗ್ಗೆ , ಲೋಕಾಯುಕ್ತ ತನಿಖೆಯ ಬಗ್ಗೆ ಹಾಗೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕಾದ ಅನಿವಾರ್ಯತೆ ಬಗ್ಗೆ ವಿವರಿಸಿದರು. ಅವೆಲ್ಲದಕ್ಕೂ ನ್ಯಾಯಮೂರ್ತಿಗಳು ಉತ್ತರ ನೀಡಿದ್ದಾರೆ ಎಂದು ಹೇಳಿದರು.


    ಲೋಕಾಯುಕ್ತ ಸ್ವತಂತ್ರ ತನಿಖಾ ಸಂಸ್ಥೆ ಎಂದು ನ್ಯಾಯಮೂರ್ತಿಗಳು ಬಲವಾಗಿ ಪ್ರತಿಪಾದಿಸಿದ್ದಾರೆ. ಈಗ ನಡೆದಿರುವ ತನಿಖೆಯು ತೃಪ್ತಿಕರವಾಗಿದೆ ಹಾಗೂ ಸಿಬಿಐಗೆ ವಹಿಸಲು ಪೂರಕ ಅಂಶಗಳಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಈ ತೀರ್ಪು ಸ್ವಾಗತಾರ್ಹ ಎಂದು ಪೆÇನ್ನಣ್ಣ ಅಭಿಪ್ರಾಯಪಟ್ಟರು.


    ಕಾನೂನಾತ್ಮಕ ಪ್ರಕ್ರಿಯೆಗಳಲ್ಲಿ ಎಲ್ಲರಿಗೂ ಭಾಗವಹಿಸಲು ಅವಕಾಶವಿದೆ. ಸಿಬಿಐ, ಜಾರಿನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳನ್ನು ರಾಜಕೀಯಕ್ಕೆ ಬಳಸುವುದನ್ನು ನಾವು ಮೊದಲಿನಿಂದಲೂ ಖಂಡಿಸುತ್ತಾ ಬಂದಿದ್ದೇವೆ. ಉಳಿದಂತೆ ಯಾವುದೇ ತನಿಖೆಯಲ್ಲಿ ಅಥವಾ ಕಾನೂನು ಪ್ರಕ್ರಿಯೆಯಲ್ಲಿ ಯಾರು ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
    ಮುಡಾ ಪ್ರಕರಣದಲ್ಲಿ ತನಿಖೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿಯನ್ನು ಪ್ರಶ್ನಿಸಿ, ಸಲ್ಲಿಸಲಾಗಿರುವ ಮೇಲ್ಮನವಿ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ಇನ್ನು ತೀರ್ಪು ನೀಡಿಲ್ಲ. ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಗೆ ಸಂಬಂಧಪಟ್ಟಂತೆ ಮಾತ್ರ ಹೈಕೋರ್ಟ್ ಏಕಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಲೋಕಾಯುಕ್ತ ತನಿಖೆ ಕೂಡ ಇನ್ನು ಪೂರ್ಣಗೊಂಡಿಲ್ಲ ಎಂದು ಅವರು ವಿವರಿಸಿದರು.



    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading