ಬೆಂಗಳೂರು: ಇಂದು ( ಮಾರ್ಚ್ 7 ) 2025 – 26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯಾಗಿದೆ. 4,09,549 ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದಾರೆ.
ಕಾಲು ನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲಿ ವಿಧಾನಸಭೆಗೆ ಆಗಮಿಸಿದ್ದರು. ಈ ವೇಳೆ ಸಚಿವ ಸಂತೋಸ್ ಲಾಡ್ ಸಿದ್ದರಾಮಯ್ಯನವರ ಗಾಲಿ ಕುರ್ಚಿಯನ್ನು ತಳ್ಳಿಕೊಂಡು ಬಂದಿದ್ದಾರೆ. ಇನ್ನು ಜಮೀರ್ ಅಹ್ಮದ್ ಖಾನ್ ಬಜೆಟ್ ಬ್ಯಾಗ್ ಹಿಡಿದು ಜತೆಗೆ ಹೆಜ್ಜೆ ಹಾಕಿದ್ದಾರೆ. ಸಚಿವರಾದ ಮಹದೇವಪ್ಪ ಹಾಗೂ ದಿನೇಶ್ ಗುಂಡೂರಾವ್ ಸಹ ಜತೆಯಲ್ಲಿದ್ದರು.
ಇನ್ನು ಸಿದ್ದರಾಮಯ್ಯ ಕಾಲುನೋವಿನ ಕಾರಣ ಈ ಬಾರಿ ಕುಳಿತುಕೊಂಡೇ ಬಜೆಟ್ ಮಂಡಿಸಿದ್ದು, 3 ಗಂಟೆ 30 ನಿಮಿಷಗಳ ಕಾಲ ಆಯವ್ಯಯ ಪಟ್ಟಿಯನ್ನು ಓದಿದರು.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


