Wednesday, September 2, 2026
spot_img
More
    spot_img
    HomeBreaking Newsಹಾಸ್ಟೆಲ್ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸೀಲಿಂಗ್‌ ಫ್ಯಾನ್‌ಗೆ ಸಾಧನ ಅಳವಡಿಕೆ

    ಹಾಸ್ಟೆಲ್ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸೀಲಿಂಗ್‌ ಫ್ಯಾನ್‌ಗೆ ಸಾಧನ ಅಳವಡಿಕೆ

    ಬೆಂಗಳೂರು: ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ವೈದ್ಯಕೀಯ ಸಂಸ್ಥೆಗಳ ಹಾಸ್ಟೆಲ್‌ಗಳಲ್ಲಿ ಸೀಲಿಂಗ್ ಫ್ಯಾನ್‌ಗಳಲ್ಲಿ ಆತ್ಮಹತ್ಯೆ ವಿರೋಧಿ ಸಾಧನಗಳನ್ನು ಅಳವಡಿಸಲು ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯಾಗಿರುವ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನಿರ್ಧರಿಸಿದೆ.

    Advertisement

    ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಮ್ಮ ಹಾಸ್ಟೆಲ್‌ ಕೊಠಡಿಗಳಲ್ಲಿ ಎರಡು ವಾರಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆತ್ಮಹತ್ಯೆ ತಡೆಯುವ ಕ್ರಮಗಳ ಬಗ್ಗೆ ಚರ್ಚಿಸಲು ಆರ್‌ಜಿಯುಎಚ್‌ಎಸ್‌ನ ಪಠ್ಯಕ್ರಮ ಅಭಿವೃದ್ಧಿ ಕೋಶ ಡಾ. ಸಂಜೀವ್‌ ನೇತೃತ್ವದ ತಂಡವು ಜುಲೈ ಕೊನೆಯ ವಾರದಲ್ಲಿ ಎಂಐಎಂಎಸ್‌ಗೆ ಭೇಟಿ ನೀಡಿತ್ತು.

    ಆತ್ಮಹತ್ಯೆ ತಡೆಗಟ್ಟಲು ಸೀಲಿಂಗ್ ಫ್ಯಾನ್‌ಗಳಲ್ಲಿ ಸುರಕ್ಷತಾ ಸಾಧನಗಳನ್ನು ಅಳವಡಿಸುವ ಯೋಜನೆಗಳು ನಡೆಯುತ್ತಿವೆ ಎಂದು ಡಾ. ಸಂಜೀವ್ ಬಹಿರಂಗಪಡಿಸಿದರು. ಪ್ರಸ್ತಾವಿತ ಸಾಧನವು ಸೀಲಿಂಗ್‌ ಫ್ಯಾನ್‌ನಲ್ಲಿ ಹೆಚ್ಚು ತೂಕ ಕಂಡು ಬಂದರೆ ಅದನ್ನು ಪತ್ತೆ ಹಚ್ಚುವಂತೆ ವಿನ್ಯಾಸಗೊಳಿಸಲಾಗಿದೆ. ಹೆಚ್ಚು ತೂಕ ಬಿದ್ದರೆ ಸೈರನ್ ಮೊಳಗಿಸುವ ಮೂಲಕ ಹಾಸ್ಟೆಲ್‌ ಅಧಿಕಾರಿಗಳನ್ನು ಎಚ್ಚರಿಸುತ್ತದೆ. ಶೀಘ್ರವೇ ಕಾರ್ಯೋನ್ಮುಖವಾಗಲು ನೆರವಾಗುತ್ತದೆ. ಈ ದ್ವಿಮುಖ ಕಾರ್ಯವಿಧಾನವು ಸಾವುನೋವುಗಳನ್ನು ತಡೆಗಟ್ಟಲು ಮಾತ್ರವಲ್ಲದೆ, ಜೀವಗಳನ್ನು ಉಳಿಸಲು ನಿರ್ಣಾಯಕ ಪ್ರತಿಕ್ರಿಯೆ ಸಮಯವನ್ನು ಒದಗಿಸಲು ಉದ್ದೇಶಿಸಲಾಗಿದೆ.

    Disclaimer: ಯಾವುದೇ ಸಮಸ್ಯೆಗೂ ಸಾವೊಂದೇ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆ ಬಂದರೆ ನಿಮ್ಮ ನೆಚ್ಚಿನ ವ್ಯಕ್ತಿ ಜೊತೆ ಮಾತನಾಡಿ ಪರಿಹಾರ ಕಂಡುಕೊಳ್ಳಿ. ಇಲ್ಲವೇ ಈ ಸಹಾಯವಾಣಿಗೆ ಕರೆಮಾಡಿ: 9152987821

    ಚೀನಾದಲ್ಲಿ ಉಲ್ಬಣಗೊಂಡ ಚಿಕುನ್ ಗುನ್ಯಾ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading