ಬೆಂಗಳೂರು: ಅಧಿಕಾರ ಇದ್ದಾಗ ನವರಂಗಿ ಆಟ, ವಿರೋಧ ಪಕ್ಷದಲ್ಲಿದ್ದಾಗ ಗೋಸುಂಬೆ ನಾಟಕ, ಅಧಿಕಾರ ಇದ್ದಾಗ ಹಗಲುವೇಷ, ವಿರೋಧ ಪಕ್ಷದಲ್ಲಿದ್ದಾಗ ರೋಷಾವೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
2019ರಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ವೇತನ ಪರಿಷ್ಕರಣೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ ವೇಳೆ ಅಂದಿನ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಅಂದಿನ ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಟೀಕಾಪ್ರಹಾರ ನಡೆಸಿದ ವಿಡಿಯೋ ಹಂಚಿಕೊಂಡಿರುವ ಆರ್. ಅಶೋಕ್, ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಪುಂಖಾನುಪುಂಖ ಹೇಳಿಕೆ ಕೊಟ್ಟಿದ್ದ ಸಿದ್ದರಾಮಯ್ಯನವರ ಬದ್ಧತೆ ಈಗೆಲ್ಲಿ ಹೋಯಿತು ಎಂದು ಪ್ರಶ್ನಿಸಿದ್ದಾರೆ.
ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ. ನಿಮ್ಮ ದಿವಾಳಿತನಕ್ಕೆ ಸಾರಿಗೆ ನೌಕರರು ಎಷ್ಟು ದಿನ ನಷ್ಟ ಅನುಭವಿಸಬೇಕು? ನಿಮ್ಮ ದುರಾಡಳಿತಕ್ಕೆ ಜನಸಾಮಾನ್ಯರು ಯಾಕೆ ದಿನನಿತ್ಯ, ಪರದಾಡಬೇಕು? ಸಾಕು ಮಾಡಿ ಈ ನಾಟಕ, ರಾಜೀನಾಮೆ ಕೊಟ್ಟು ಕರ್ನಾಟಕವನ್ನು ಉಳಿಸಿ, ಕನ್ನಡಿಗರನ್ನು ನೆಮ್ಮದಿಯಾಗಿರಲು ಬಿಡಿ.’ ಎಂದು ಟೀಕಿಸಿದ್ದಾರೆ. ಹಿಂದಿನ ಸಾರಿಗೆ ನೌಕರರ ಮುಷ್ಕರ ವೇಳೆ ಸಿದ್ದರಾಮಯ್ಯ ಅವರು ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಎಂದು ಕುಟುಕಿದ್ದರು.
ಧರ್ಮಸ್ಥಳ: ಮತ್ತೆ ಎಸ್ಐಟಿ ಅಧಿಕಾರಿಗಳನ್ನು ಗುಡ್ಡ ಹತ್ತಿಸಿದ ಅನಾಮಿಕ; ಇಂದು ಎಷ್ಟು ಅಸ್ತಿಪಂಜರ?
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


