Monday, August 3, 2026
spot_img
More
    spot_img
    HomeLatest newsರಾಜ್ಯದ ಈ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬರೋಬ್ಬರಿ 100250 ಕಳ್ಳ ಮತ ಹಾಕಿಸಿದೆ; ದಾಖಲೆ ಬಿಚ್ಚಿಟ್ಟ...

    ರಾಜ್ಯದ ಈ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಬರೋಬ್ಬರಿ 100250 ಕಳ್ಳ ಮತ ಹಾಕಿಸಿದೆ; ದಾಖಲೆ ಬಿಚ್ಚಿಟ್ಟ ರಾಹುಲ್‌ ಗಾಂಧಿ

    ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗ ಬಿಜೆಪಿ ಜತೆ ಕೈಜೋಡಿಸಿ ಮತಗಳ್ಳತನ ಮಾಡಲು ಅನುವು ಮಾಡಿಕೊಟ್ಟಿದೆ ಎಂದು ಆರೋಪಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಾಕ್ಷಿ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ತಿಳಿಸಿದ್ದರು.

    Advertisement

    ಅದರಂತೆ ಇಂದು ( ಆಗಸ್ಟ್‌ 7 ) ವಿಶೇಷ ಸುದ್ದಿಗೋಷ್ಟಿ ನಡೆಸಿದ ರಾಹುಲ್‌ ಗಾಂಧಿ ದೇಶದ ವಿವಿಧ ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.

    ರಾಜ್ಯದ ಬೆಂಗಳೂರು ಸೆಂಟ್ರಲ್‌ ಕ್ಷೇತ್ರದ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ ಮಹದೇವಪುರ ಮತಗಟ್ಟೆಗಳ ವೋಟ್‌ಗಳ ಮೇಲೆ ಅನುಮಾನ ಹೊರಹಾಕಿದರು.

    ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಪಿ.ಸಿ. ಮೋಹನ್‌ 32707 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು ಎಂದು ಘೋಷಿಸಲಾಯಿತು. ಮಹದೇವಪುರ ಒಂದರಲ್ಲೇ ಬಿಜೆಪಿ 114046 ಮತಗಳಿಂದ ಮುನ್ನಡೆ ಸಾಧಿಸಿತ್ತು ಎಂದು ಹೇಳಿದ ರಾಹುಲ್‌ ಗಾಂಧಿ ಈ ಪೈಕಿ 100250 ಮತಗಳು ನಕಲಿ ಎಂದು ಗಂಭೀರ ಆರೋಪ ಮಾಡಿದ್ದಾರೆ.

    ಇಲ್ಲಿ ಅಕ್ರಮ ನಡೆಯದೇ ಇದ್ದಿದ್ದರೆ ಕಾಂಗ್ರೆಸ್‌ ಅಭ್ಯರ್ಥಿ ಮನ್ಸೂರ್‌ ಅಲಿ ಖಾನ್‌ ಮಹದೇವಪುರದಲ್ಲಿ 80000 ಮತಗಳ ಮುನ್ನಡೆ ಕಾಯ್ದುಕೊಳ್ಳುತ್ತಿದ್ದರು ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

    ಧರ್ಮಸ್ಥಳದಲ್ಲಿ ಯುಟ್ಯೂಬರ್ಸ್‌ ಮೇಲೆ ಹಲ್ಲೆ; ವಿಜಯೇಂದ್ರ ಪ್ರತಿಕ್ರಿಯೆ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading