Friday, September 4, 2026
spot_img
More
    spot_img
    HomeLatest newsದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದ ರಾಹುಲ್‌ ಗಾಂಧಿ; ಬಿಜೆಪಿ ವಿರುದ್ಧ ವಾಗ್ದಾಳಿ

    ದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದ ರಾಹುಲ್‌ ಗಾಂಧಿ; ಬಿಜೆಪಿ ವಿರುದ್ಧ ವಾಗ್ದಾಳಿ

    ನವದೆಹಲಿ: ಲೋಕಸಭೆ ಚುನಾವಣೆ ಕರ್ನಾಟಕದ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾನ ನಡೆದಿರುವುದನ್ನು ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಬಹಿರಂಗಪಡಿಸಿದ್ದು. ಚುನಾವಣಾ ಕಾರ್ಯವೈಖರಿ ಮೇಲೆ ಸಂಶಯದ ನೆರಳು ಮೂಡಿದೆ.

    Advertisement

    ಈ ಹಿಂದೆ ಕರ್ನಾಟಕದಲ್ಲಿ ನಕಲಿ ಮತದಾನ ನಡೆದಿದೆ ಎಂಬ ಆರೋಪಕ್ಕೆ ದಾಖಲೆ ಸಮೇತ ವಿವರ ನೀಡಿರುವ ಅವರು ಬಿಹಾರದಲ್ಲೂ ಚುನಾವಣಾ ಆಯೋಗದೊಂದಿಗೆ ಬಿಜೆಪಿ ಕಾಮೀಲಾಗಿ ಗೆಲಲು ಹೊರದಿದೆ ಎಂದು ಆರೋಪಿಸಿದ್ದಾರೆ.

    ಶುಕ್ರವಾರ ನವದೆಹಲಿಯ ನೂತನ ಕಾಂಗ್ರೆಸ್ ಕಚೇರಿ ಇಂದಿರಾಗಾಂಧಿ ಭವನದಲ್ಲಿ ವಿಡಿಯೋ ಸಾಕ್ಷಿ ಮೂಲಕ ನಕಲಿ ಮತದಾರರ ಸೇರ್ವಣೆ ಹಾಗೂ ಕೆಲವು ಕಡೆ ಅಸಲಿ ಮತದಾರರನ್ನು ತೆಗೆದು ಹಾಕಿರುವುದನ್ನು ದಾಖಲೆಗಳ ಮೂಲಕ ಬಹಿರಂಗಪಡಿಸಿ ಆಯೋಗದ ವಿರುದ್ಧ ಕಿಡಿಕಾರಿದರು.

    ತಮ್ಮ ಪಕ್ಷವು ಸಂಶೋಧನೆ ನಡೆಸಿ ಮಹದೇವಪುರದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನಕಲಿ ಮತದಾರರು, ಅಮಾನ್ಯ ವಿಳಾಸಗಳು, ಬೃಹತ್ ಮತದಾರರು ಕಂಡುಬಂದಿದ್ದಾರೆ.

    ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ 6.5 ಲಕ್ಷ ಮತಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಮತ ಚೋರಿ ಇತ್ತು ಎಂದು ಹೇಳಿದರು.

    ಕರ್ನಾಟಕದ ಮತದಾರರ ಪಟ್ಟಿಗಳಲ್ಲಿ ವಂಚನೆ ನಡೆದಿದೆ ಎಂದು ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು, ಕರ್ನಾಟಕದಲ್ಲಿ 40,009 ನಕಲಿ ಮತದಾರರ ವಿಳಾಸಗಳಿವೆ ಎಂದಿದ್ದಾರೆ. ಕಾಂಗ್ರೆಸ್ ನಡೆಸಿದ¿ವೋಟ್ ಚೋರಿ ತನಿಖೆಯಲ್ಲಿ ಮನೆ ಸಂಖ್ಯೆ 0ಎಂದು ಉಲ್ಲೇಖಿಸಿರುವುದಾಗಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ.

    ಚುನಾವಣಾ ಆಯೋಗವು ಮತಗಳನ್ನು ಕದಿಯಲು ಬಿಜೆಪಿಯೊಂದಿಗೆ ಕೈಜೋಡಿಸಿದೆ. ಮತದಾರರ ಪಟ್ಟಿಗಳಿಗೆ ನಕಲಿ ಜನರನ್ನು ಸೇರಿಸಲಾಗುತ್ತಿದೆ ಎಂದಿದ್ದಾರೆ. ಕರ್ನಾಟಕ ಮತದಾರರ ಪಟ್ಟಿಯನ್ನು ತೋರಿಸುವ ಮೂಲಕ ಅವರು ತಮ್ಮ ಆರೋಪಕ್ಕೆ ಸಾಕ್ಷಿ ಒದಗಿಸಿದ್ದಾರೆ.

    ನನಗೆ ರೈತರ ಹಿತವೇ ಮುಖ್ಯ; ಟ್ರಂಪ್‌ಗೆ ನರೇಂದ್ರ ಮೋದಿ ತಿರುಗೇಟು

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading