Saturday, September 19, 2026
spot_img
More
    spot_img
    HomeStateDistrictಧರ್ಮಸ್ಥಳದಲ್ಲಿ ಯುಟ್ಯೂಬರ್ಸ್‌ ಮೇಲೆ ಹಲ್ಲೆ: ಹಗಲೇ ಹೀಗೆ ಇನ್ನು ರಾತ್ರಿ ಈ ಗೂಂಡಾಗಳು ಏನೆಲ್ಲ ಮಾಡಬಹುದು...

    ಧರ್ಮಸ್ಥಳದಲ್ಲಿ ಯುಟ್ಯೂಬರ್ಸ್‌ ಮೇಲೆ ಹಲ್ಲೆ: ಹಗಲೇ ಹೀಗೆ ಇನ್ನು ರಾತ್ರಿ ಈ ಗೂಂಡಾಗಳು ಏನೆಲ್ಲ ಮಾಡಬಹುದು ಎಂದ ರಜತ್!

    ದಕ್ಷಿಣ ಕನ್ನಡ: ಧರ್ಮಸ್ಥಳ ಸರಣಿ ಕೊಲೆ, ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಯುತ್ತಿದೆ. ಒಂದೆಡೆ ಹಲವು ಅಸ್ತಿಪಂಜರಗಳು ಪತ್ತೆಯಾಗಿದ್ದು, ಪ್ರಕರಣ ಭಾರೀ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮತ್ತೊಂದೆಡೆ ಮಾಧ್ಯಮದವರ ಮೇಲೆ ಹಲ್ಲೆ ನಡೆಸಲಾಗಿದೆ.

    Advertisement

    ಹೌದು, ನಿನ್ನೆ ( ಆಗಸ್ಟ್‌ 6 ) ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲ್ಲಲ್ಪಟ್ಟ ಸೌಜನ್ಯ ಮನೆಗೆ ಭೇಟಿ ನೀಡಿ ಅವರ ಕುಟುಂಬದವರ ಜೊತೆ ಮಾತನಾಡಿದ್ದರು.

    ಹೀಗೆ ರಜತ್‌ ಸೌಜನ್ಯ ಮನೆಯಿಂದ ಹೊರಬಂದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು. ಈ ವೇಳೆ ಕಾರುಗಳಲ್ಲಿ ಹಾಗೂ ಆಟೊಗಳಲ್ಲಿ ಬಂದ ಕಿಡಿಗೇಡಿಗಳು ಏಕಾಏಕಿ ಕುಡ್ಲ ರಾಂಪೇಜ್‌ ಹಾಗೂ ಯುನೈಟೆಡ್‌ ಮೀಡಿಯಾ ಈ ಎರಡು ಚಾನೆಲ್‌ಗಳ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ.

    ಈ ಹಿಂದಿನಿಂದಲೂ ಧರ್ಮಸ್ಥಳದಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ವಿಡಿಯೊ ಮಾಡಿದ್ದ ಇವರ ಮೇಲೆ ಕ್ಷೇತ್ರದ ಹೆಸರನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಹಲ್ಲೆ ನಡೆದಿದೆ.

    ಹೀಗೆ ಮಾಧ್ಯಮದವರ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ವರ್ತನೆಯನ್ನು ಕಣ್ಣಾರೆ ಕಂಡ ರಜತ್‌ ಘಟನೆಯನ್ನು ಬಿಚ್ಚಿಟ್ಟಿದ್ದಾರೆ. ಕಾರುಗಳಲ್ಲಿ ಬಂದ ಗೂಂಡಾಗಳು ತುಂಬಾ ಕೆಟ್ಟ ರೀತಿಯಲ್ಲಿ ನಡೆದುಕೊಂಡರು ಎಂದು ಹೇಳಿದ್ದಾರೆ. ಅಲ್ಲದೇ ಹಗಲಲ್ಲೇ ಹೀಗೆ ನಡೆದುಕೊಳ್ಳುವ ಇವರು ಇನ್ನು ರಾತ್ರಿ ಸಮಯದಲ್ಲಿ ಎನ್ನು ಏನೆಲ್ಲ ಮಾಡಬಹುದು ಎಂದು ರಜತ್‌ ಕಿಡಿಕಾರಿದ್ದಾರೆ. ರಜತ್‌ ಮಾತನಾಡಿದ ವಿಡಿಯೊ ಮುಂದಿದೆ.

    ಧರ್ಮಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ: ಕಲ್ಲು ತೂರಿದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು; ವಿಡಿಯೊ

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading