ಸಿಎಂ ಸಿದ್ದರಾಮಯ್ಯ ಅವರ ಕಾರಿನ ಮೇಲೂ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿರುವ ಕೇಸ್ಗಳು ದಾಖಲಾಗಿವೆ.ಸಿಎಂ ಸಿದ್ದರಾಮಯ್ಯ ಅವರು ಬಳಸುವ ಫಾರ್ಚೂನರ್ ಕಾರಿನ ಮೇಲೆ ಏಳು ಕೇಸ್ ಇತ್ತು ಹಾಗಾಗಿ ಸಿದ್ದರಾಮಯ್ಯ ಅವರು ಸಾರ್ವಜನಿಕರಂತೆ ದಂಡ ಪಾವತಿಸಿದ್ದಾರೆ ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆ ಬೆನ್ನಲೇ ಸಿಎಂ ಸಿದ್ದರಾಮಯ್ಯ ಅವರು ದಂಡ ಪಾವತಿಸಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಶೇ.50ರ ರಿಯಾಯಿತಿ ಅಡಿ ದಂಡ ಪಾವತಿಸಲು ರಾಜ್ಯ ಸರಕಾರವು ಅವಕಾಶ ಕಲ್ಪಿಸಿದ್ದು, ಸಿದ್ದರಾಮಯ್ಯ ಅವರು ಬಳಸುತ್ತಿರುವ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ದಂಡ ಪಾವತಿಯಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.
ದಿನನಿತ ಸಿದ್ದರಾಮಯ್ಯ ಫಾರ್ಚೂನರ್ ಕಾರನ್ನು ಬಳಸುತ್ತಿದ್ದು, 2024ರಿಂದ ಇಲ್ಲಿವರೆಗೆ 7 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎನ್ನಲಾಗಿದೆ. ಇದರಲ್ಲಿ ಆರು ಕೇಸ್ಗಳು ಕಾರಿನಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದ ಕಾರಣಕ್ಕೆ ದಾಖಲಾಗಿದ್ದವು. ಇನ್ನು ಒಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಸಿಎಂ ಅವರಿದ್ದ ಕಾರು ಅತಿ ವೇಗವಾಗಿ ಸಂಚರಿಸಿ ನಿಯಮ ಉಲ್ಲಂಘನೆಯಾಗಿತ್ತು.ಹೀಗಾಗಿ ಸಿಎಂ ಕಾರಿನ ಮೇಲೂ ಟ್ರಾಫಿಕ್ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಯ್ತು.
2024ರ ಜನವರಿ 24ರಂದು ಮಧ್ಯಾಹ್ನ 12.19ರಂದು ಒಲ್ಡ್ ಏರ್ಪೋರ್ಟ್ ರಸ್ತೆಯ ಲೀಲಾ ಪ್ಯಾಲೇಸ್ ಜಂಕ್ಷನ್ ಬಳಿ ಹೋಗುವಾಗ ಸಿದ್ದರಾಮಯ್ಯ ಅವರು ಸೀಟು ಬೆಲ್ಟ್ ಧರಿಸಿಲ್ಲ. ಅದೇ ಜಂಕ್ಷನ್ನಲ್ಲಿ ಫೆಬ್ರುವರಿ ಹಾಗೂ ಆಗಸ್ಟ್ನಲ್ಲಿ ಮತ್ತೆರಡು ಪ್ರಕರಣಗಳು ದಾಖಲಾಗಿದ್ದವು. ಮಾರ್ಚ್ನಲ್ಲಿ ಚಂದ್ರಿಕಾ ಹೋಟೆಲ್ ಜಂಕ್ಷನ್ ಹಾಗೂ ಆಗಸ್ಟ್ನಲ್ಲಿ ಶಿವಾನಂದ ಸರ್ಕಲ್ ಹಾಗೂ ಡಾ.ರಾಜ್ಕುಮಾರ್ ಪ್ರತಿಮೆ ಜಂಕ್ಷನ್ಗಳ ಬಳಿ ಸೀಟು ಬೆಲ್ಟ್ ಧರಿಸಿದೇ ನಿಯಮ ಉಲ್ಲಂಘಿಸಿದ ಪ್ರಕರಣಗಳು ದಾಖಲಾಗಿದ್ದವು. ಈ ವರ್ಷ ಜುಲೈ 9ರಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ಏರ್ಪೋರ್ಟ್ ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಸಿಎಂ ಅವರಿದ್ದ ಕಾರು ಓವರ್ ಸ್ಟೀಡಾಗಿ ಚಲಾಯಿಸಿ ನಿಯಮ ಉಲ್ಲಂಘಿಸಿತ್ತು.
ಇತ್ತೀಚೆಗಷ್ಟೇ ಸಂಚಾರ ಪೊಲೀಸರು ಟ್ರಾಫಿಕ್ ದಂಡ ಪಾವತಿಸಲು ರಿಯಾಯಿತಿ ಘೋಷಿಸಿದ್ದರು. ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರವೇ ಶೇ 50ರಷ್ಟು ಡಿಸ್ಕೌಂಟ್ ಸೌಲಭ್ಯ ನೀಡಿದ್ದು, ಸಿದ್ದರಾಮಯ್ಯ ಕೂಡ ದಂಡ ಪಾವತಿಸಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಅವರ ಸಿಬ್ಬಂದಿ ಸುಮಾರು 2,500 ರೂಪಾಯಿ ದಂಡ ಪಾವತಿದ್ದು, ಈಗ ಅವರ ಕಾರಿನ ಮೇಲಿದ್ದ ಟ್ರಾಫಿಕ್ ಕೇಸ್ಗಳು ಈಗ ಕ್ಲಿಯರ್ ಆಗಿವೆ ಎಂದು ಹೇಳಲಾಗುತ್ತಿದೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


