Monday, August 31, 2026
spot_img
More
    spot_img
    HomeLatest newsಜನರಿಗೆ ಎಲ್ಲೇ ಸಮಸ್ಯೆಯಾದರೂ ಪ್ರಶ್ನೆ ಮಾಡುವುದು ನನ್ನ ಕರ್ತವ್ಯ: ಪ್ರಕಾಶ್‌ ರಾಜ್

    ಜನರಿಗೆ ಎಲ್ಲೇ ಸಮಸ್ಯೆಯಾದರೂ ಪ್ರಶ್ನೆ ಮಾಡುವುದು ನನ್ನ ಕರ್ತವ್ಯ: ಪ್ರಕಾಶ್‌ ರಾಜ್

    ಬೆಂಗಳೂರು: ಭೂಸ್ವಾಧೀನ ಪ್ರಕ್ರಿಯೆ ಹಾಗೂ ಅಲ್ಲಿನ ರೈತರ ಹೋರಾಟಕ್ಕೆ ಸಂಬಂಧಪಟ್ಟಂತೆ ಮತ್ತೊಮ್ಮೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ಗೆ ತಿರುಗೇಟು ನೀಡಿದ್ದಾರೆ.

    Advertisement

    ದೇವನಹಳ್ಳಿಯ ಹೋರಾಟದ ಬದಲಾಗಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಗುಜರಾತ್‍ಗೆ ಹೋಗಿ ರೈತರ ಪರವಾಗಿ ಹೋರಾಟ ಮಾಡಲಿ ಎಂದು ಸಚಿವ ಪಾಟೀಲ್‍ರು ನನ್ನ ಬಗ್ಗೆ ಹೇಳಿಕೆ ನೀಡಿದ್ದಾರೆ. ನಾನು ಅಲ್ಲೆಲ್ಲಾ ಹೋರಾಟಕ್ಕೂ ಬೆಂಬಲ ನೀಡಿದ್ದೇನೆ. ತಮಿಳುನಾಡಿನ ರೈತರು ದೆಹಲಿಯಲ್ಲಿ 100 ದಿನ ಹೋರಾಟ ನಡೆಸಿದಾಗ ಅದರಲ್ಲಿ ಭಾಗವಹಿಸಿದ್ದು ನಾನೇ. ಪಂಜಾಬ್, ಹರಿಯಾಣ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಿದಾಗ ಅದರಲ್ಲಿ ಹಾಜರಾಗಿದ್ದೂ ನಾನೇ. ಎಲ್ಲೇ ರೈತರಿಗೆ ಸಮಸ್ಯೆಯಾದರೂ ನಾನು ಭಾಗವಹಿಸುತ್ತೇನೆ ಎಂದು ಹೇಳಿದರು.

    ಈಗ ದೇವನಹಳ್ಳಿಯಲ್ಲಿ ರೈತರಿಗೆ ಸಮಸ್ಯೆಯಾಗಿದೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ನನ್ನ ಬಗ್ಗೆ ಪ್ರಶ್ನೆ ಮಾಡುವ ಬದಲಾಗಿ ಸಮಸ್ಯೆ ಬಗೆಹರಿಸುವತ್ತ ಗಮನ ಕೊಡಿ. ಮಣಿಪುರದಲ್ಲಿ ಸಮಸ್ಯೆಯಾದರೂ ನಾನು ಹೋಗುತ್ತೇನೆ. ನಾನು ಯಾವುದೇ ಪಕ್ಷಕ್ಕೆ ಸೀಮಿತನಲ್ಲ. ಜನರ ಪಕ್ಷ ಸೇರಿದವನು. ನೀವು ಒಂದು ಪಕ್ಷಕ್ಕೆ ಸೀಮಿತವಾಗಿದ್ದೀರ ಎಂದಿದ್ದಾರೆ.

    ಗುಜರಾತಿನಿಂದ ಪ್ರಧಾನಿಯಾಗಿರುವ ಮಹಾಪ್ರಭುವನ್ನು ಅತಿ ಹೆಚ್ಚು ಪ್ರಶ್ನೆ ಮಾಡಿದವನು ನಾನೇ. ಜನರಿಗೆ ಎಲ್ಲೇ ಸಮಸ್ಯೆಯಾದರೂ ಪ್ರಶ್ನೆ ಮಾಡುವುದು ನನ್ನ ಕರ್ತವ್ಯ ಎಂದಿದ್ದಾರೆ.

    ದೇವನಹಳ್ಳಿಯ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರವಾದ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. ಅದಕ್ಕೂ ಮುನ್ನ ಕಾನೂನಿನ ತೊಡಕಿದೆ. ಅದನ್ನು ಬಗೆಹರಿಸುವ ಸಂಬಂಧ ಜು.15ರಂದು ವಿಷಯ ತಿಳಿಸುವುದಾಗಿ ಹೇಳಿದ್ದಾರೆ. ಅದರತ್ತ ಗಮನ ಕೊಡಿ ಎಂದು ಸಲಹೆ ನೀಡಿದ್ದಾರೆ.

    ಈ ನಡುವೆ ಕೆಲ ಕಿಡಿಗೇಡಿಗಳು ದೇವನಹಳ್ಳಿಯ ರೈತರ ಬಳಿ ಹೋಗಿ ಎಕರೆಗೆ 3 ಕೋಟಿ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಸರ್ಕಾರದಿಂದ ಪರಿಹಾರ ಕೊಡಲು ವಿಳಂಬವಾಗುತ್ತಿದೆ ಎಂದು ಬಿಂಬಿಸುತ್ತಿದ್ದಾರೆ. ಜೊತೆಗೆ ಇಡೀ ಪ್ರದೇಶವನ್ನು ಹಸಿರು ವಲಯವನ್ನಾಗಿ ಘೋಷಣೆ ಮಾಡಿಸಿ 25 ವರ್ಷ ಜಮೀನನ್ನು ಪರಭಾರೆ ಮಾಡಲು ಸಾಧ್ಯವಾಗದಂತೆ ಮಾಡಿಸುವುದಾಗಿ ಬೆದರಿಸುತ್ತಿದ್ದಾರೆ. ಅವರು ನಿಮಗೆ ಪರಿಚಯವಿದ್ದರೆ ಸ್ವಲ್ಪ ತಿಳಿಹೇಳಿ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

    ಎಲ್ಲದಕ್ಕೂ ಕಾನೂನಿನಲ್ಲಿ ಪರಿಹಾರವಿದೆ. ನಿಮಗೆ ಪರಿಹಾರ ತಿಳಿಯದೇ ಇದ್ದರೆ ನಮ ಬಳಿಗೆ ಬನ್ನಿ. ನಮಲ್ಲೂ ಕಾನೂನು ತಜ್ಞರಿದ್ದಾರೆ. ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು ಸಂವಿಧಾನ ತಿಳಿದವರು. ರೈತರ ಪರವಾಗಿ ಐತಿಹಾಸಿಕ ತೀರ್ಪು ನೀಡಿದವರು. ಅವರಿಂದ ನಿಮಗೆ ಸಲಹೆ ಸಿಗುತ್ತದೆ ಎಂದಿದ್ದಾರೆ. ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಜವಾಬ್ದಾರಿಯುತವಾಗಿ ಮಾತನಾಡಬೇಕು ಎಂದು ಪ್ರಕಾಶ್‍ರೈ ಸಲಹೆ ನೀಡಿದ್ದಾರೆ.

    ವಾಟ್ಸಾಪ್‌ನಲ್ಲಿ ಲಾಸ್ಟ್ ಸೀನ್ ಮತ್ತು ಬ್ಲೂ ಟಿಕ್ ಬದಲಾಯಿಸುವ ಸುಲಭ ಟಿಪ್ಸ್ ನಿಮಗೆ ಗೊತ್ತಾ

    ನನ್ನ ಜೊತೆ ಸಹಕರಿಸಿದರೆ ಕೆಲಸ ಆಗುತ್ತದೆ; ಯುವತಿ ಜತೆ ಮ್ಯಾಜಿಸ್ಟ್ರೇಟ್‌ನ ವಿಡಿಯೊ ಸೆರೆ!

    ಎಐ ವೆಬ್‌ಸೈಟ್‌


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading