ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ.
ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ ಬಾಕಿ ಉಳಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಚಾಲಕರು ಹಾಗೂ ಮಾಲೀಕರು ಮುಷ್ಕರ ನಡೆಸುತ್ತಿದ್ದರು. ಪ್ರತಿಭಟನೆಯಿಂದ ಎಚ್ಚೆತ್ತ ರಾಜ್ಯ ಸರ್ಕಾರ 4 ತಿಂಗಳ ಬಾಕಿ ಹಣ ಬಿಡುಗಡೆ ಮಾಡಿದೆ.
ಮುಷ್ಕರ ಕುರಿತು ಮಾತನಾಡಿದ್ದ ರಾಜ್ಯ ಲಾರಿ ಮಾಲೀಕರ ಸಂಘದ ರಾಜ್ಯಾಧ್ಯಕ್ಷ ಷಣ್ಮುಗಪ್ಪ ಅವರು, ನಮ್ಮ ಖಾತೆಗೆ ಹಣ ಬರುವವರೆಗೂ ಮುಷ್ಕರ ಹಿಂಪಡೆಯಲ್ಲ ಎಂದು ಎಚ್ಚರಿಕೆ ನೀಡಿದ್ದರು.
ಕಳೆದ 5 ತಿಂಗಳಿನಿಂದ 260 ಕೋಟಿ ರೂ ಬಿಡುಗಡೆ ಮಾಡಬೇಕು. ಜೂ.19ರಂದು 100 ಕೋಟಿ ರೂ ಹಾಕುವುದಾಗಿ ಹೇಳಿದ್ದರು. ಈವರೆಗೂ 1 ರೂ ಹಣವನ್ನೂ ನೀಡಿಲ್ಲ. ಆಹಾರ ಸಚಿವರು ಹಾಗೂ ಅಧಿಕಾರಿಗಳು ಮಾತುಕತೆಗೂ ಕರೆದಿಲ್ಲ. ಹಾಗಾಗಿ ಇಂದಿನಿಂದ ಮುಷ್ಕರ ಮಾಡುತ್ತಿದ್ದೇವೆ. ಖಾತೆಗೆ ಹಣ ಬಂದ ಮೇಲೆ ಅಕ್ಕಿ ಸರಬರಾಜು ಮಾಡುತ್ತೇವೆ ಎಂದು ಹೇಳಿದ್ದರು.
ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಇದೀಗ ನಾಲ್ಕು ತಿಂಗಳಿನ ಬಾಕಿ ಉಳಿಸಿಕೊಂಡಿದ್ದ 244 ಕೋಟಿ ಬಿಡುಗಡೆ ಮಾಡಿದ್ದು, ಪಡಿತರ ಅಕ್ಕಿ ಸಾಗಣೆ ಎಂದಿನಂತೆ ನಡೆಯಲಿ ಎಂದು ಹೇಳಿದೆ.
ಯಾವುದೇ ಅನುಮಾನ ಬೇಡ ಇವರೇ ಬಿಜೆಪಿ ರಾಜ್ಯಾಧ್ಯಕ್ಷ ಎಂದ ರೇಣುಕಾಚಾರ್ಯ
ಎಐ ಕನ್ನಡ ಕೃಷಿ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


