Tuesday, September 1, 2026
spot_img
More
    spot_img
    HomeLatest newsನನಗೆ ಮಂತ್ರಿ ಸ್ಥಾನ ಬೇಡ ಡಿಕೆಶಿ ಸಿಎಂ ಆಗಬೇಕು: ಸಿಪಿ ಯೋಗೇಶ್ವರ್‌

    ನನಗೆ ಮಂತ್ರಿ ಸ್ಥಾನ ಬೇಡ ಡಿಕೆಶಿ ಸಿಎಂ ಆಗಬೇಕು: ಸಿಪಿ ಯೋಗೇಶ್ವರ್‌

    ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ ಹೇಳಿದ್ದಾರೆ.

    Advertisement

    ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡಿಕೆಶಿ ಸಿಎಂ ಆಗಬೇಕು ಎಂಬ ಕೂಗು ಹೆಚ್ಚಾಗುತ್ತಲೇ ಇದ್ದು, ಕಾಂಗ್ರೆಸ್‌ ಶಾಸಕರೇ ಮಾಧ್ಯಮದವರ ಬಳಿ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ.

    ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಶಾಸಕ ಸಿ.ಪಿ.ಯೋಗೇಶ್ವರ್‌ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್‌ ಸರ್ಕಾರದಲ್ಲಿ ಶಾಸಕನಾಗಿ ಆರು ತಿಂಗಳಾಗಿದೆ. ಕಾಂಗ್ರೆಸ್‌ನಲ್ಲಿ ನಾನು ಬಹಳ ಸಕ್ರಿಯನಾಗಿ ಓಡಾಡುತ್ತಿಲ್ಲ. ನನಗೆ ಮಂತ್ರಿ ಸ್ಥಾನದ ಆಸಕ್ತಿಯಿಲ್ಲ. ಆದರೆ ಮೊದಲು ಡಿಕೆಶಿಗೆ ಸಿಎಂ ಸ್ಥಾನ ಸಿಗಲು ಬೆಂಬಲ ನೀಡುತ್ತೇನೆ ಎಂದು ಹೇಳಿದರು.

    ಇನ್ನು ಮುಂದುವರಿದು ಮಾತನಾಡಿದ ಅವರು, ಡಿಕೆಶಿ ಸಿಎಂ ಆಗಲಿ ಎಂಬುದು ಜಿಲ್ಲೆಯ ಶಾಸಕರ ಬಯಕೆಯಾಗಿದೆ. ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಮಾಡಲಿದೆ ಎಂದರು

    ಇನ್ನು ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಕಾಂಗ್ರೆಸ್‌ ಬೆಳವಣಿಗೆ ಬಗ್ಗೆ ಸೀರಿಯಸ್‌ ಆಗಿ ಫಾಲೋ ಮಾಡುತ್ತಿಲ್ಲ.‌ ಯಾರು ಏನು ಆಗುತ್ತಿದ್ದಾರೆ. ಏನು ಆಗುತ್ತಿದೆ ಎನ್ನುವ ಮಾಹಿತಿ ಇಲ್ಲ. ಸದ್ಯಕ್ಕೆ ನಾನು ಸಕ್ರಿಯವಾಗಿಲ್ಲ ಎಂದಿದ್ದಾರೆ.

    ಈ ಮೂಲಕ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿ ಎಂದು ಬಹಿರಂಗ ಹೇಳಿಕೆ ನೀಡಿದ ಯೋಗೇಶ್ವರ್‌ ಸಿಎಂ ಸಿದ್ದರಾಮಯ್ಯ ಬಣದ ವಿರೋಧಿಯಾಗಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

    ಸಿಐಡಿ ತನಿಖೆಯಲ್ಲಿ ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಕಾರಣ ಬಯಲು: ಕೊಹ್ಲಿ ಹೆಸರು ಬಳಸಿ ಮಹಾ ತಪ್ಪು ಮಾಡಿದ್ದು ಈತನೇ!

    ಎಐ ಕನ್ನಡ ಕೃಷಿ ವೆಬ್‌ಸೈಟ್‌ಗಾಗಿ ಇಲ್ಲಿ ಕ್ಲಿಕ್‌ ಮಾಡಿ


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading