Saturday, September 19, 2026
spot_img
More
    spot_img
    HomeStateDistrictಸುಂಟಿಕೊಪ್ಪ: ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

    ಸುಂಟಿಕೊಪ್ಪ: ಭುಜ ನೋವೆಂದು ಆಸ್ಪತ್ರೆಗೆ ಹೋದ ಯುವಕ ಸಾವು!

    ಕುಶಾಲನಗರ : ಭುಜ ನೋವು ಎಂದು ಆಸ್ಪತ್ರೆಗೆ ಹೋಗಿದ್ದ ಯುವಕ ಎರಡು ಇಂಜೆಕ್ಷನ್​ ಮತ್ತು ಮಾತ್ರೆ ಪಡೆದ ಬಳಿಕ ತೀವ್ರ ಅಸ್ವಸ್ಥನಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲ್ಲೂಕಿ ಸುಂಟಿಕೊಪ್ಪದಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ತಮ್ಮ ಮಗನ ಸಾವಾಗಿದೆ ಎಂದು ಪೋಷಕರು ಆರೋಪಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    Advertisement

    ಏನಿದು ಘಟನೆ ?
    ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪ ಗ್ರಾಮದ ನಿವಾಸಿ ಶೇಖರ್ ಅವರ ಪುತ್ರ ವಿನೋದ್ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆ ಪಡೆಯಲೆಂದು ಸುಂಟಿಕೊಪ್ಪದಲ್ಲೇ ಇರುವ ಖಾಸಗಿ ಕ್ಲಿನಿಕ್​ಗೆ ತೆರಳಿದ್ದಾರೆ. ಇವರನ್ನು ಪರೀಕ್ಷಿಸಿದ ವೈದ್ಯ ಯಶೋಧರ್ ಪೂಜಾರಿ ಮಾತ್ರೆ ಜೊತೆಗೆ ಇಂಜೆಕ್ಷನ್​ ಕೂಡ ನೀಡಿದ್ದಾರೆ. ಆದರೂ ನೋವು ಕಡಿಮೆಯಾಗದ ಕಾರಣ ಮತ್ತೊಂದು ಇಂಜೆಕ್ಷನ್​ ಕೊಟ್ಟು ಮನೆಗೆ ಕಳುಹಿಸಿದ್ದಾರೆ. ಕ್ಲಿನಿಕ್​ನಿಂದ ಮನೆಗೆ ಆಗಮಿಸಿದ ವಿನೋದ್ ಕೆಲವೇ ಹೊತ್ತಿನಲ್ಲಿ ಅಸ್ವಸ್ಥರಾಗಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರು ಆಟೋದಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ಅವರನ್ನು ಕರೆ ತಂದಿದ್ದಾರೆ. ಆದರೆ ಅಷ್ಟರಲ್ಲಾಗಲೇ ವಿನೋದ್ ಸಾವನ್ನಪ್ಪಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ.

    ಮೃತ ವಿನೋದ್​ಗೆ ಯಾವುದೇ ಆರೋಗ್ಯ ಸಮಸ್ಯೆಗಳು ಇರಲಿಲ್ಲ. ಕಳೆದ ಕೆಲವು ದಿನಗಳಿಂದ ತಮ್ಮ ಮನೆಯನ್ನ ತಾವೇ ನವೀಕರಿಸಿದ್ದರು. ಮರಗಳನ್ನ ಇಳಿಸಿದ್ದರಿಂದ ಸ್ವಲ್ಪ ಭುಜ ನೋವಿದೆ ಅಂತ ಕ್ಲಿನಿಕ್​ಗೆ ತೆರಳಿದ್ದೇ ಅವರ ಜೀವಕ್ಕೀಗ ಮುಳುವಾಗಿದೆ. ಭುಜ ನೋವಿಗೆ ಕಾರಣ ಏನು ಎಂದು ವೈದ್ಯರು ಸರಿಯಾಗಿ ಪರಿಶೀಲಿಸದೆ ಎರಡೆರಡು ಇಂಜೆಕ್ಷನ್ ನೀಡಿದ್ದೇ ವಿನೋದ್​ ಸಾವಿಗೆ ಕಾರಣ ಅಂತ ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೆ ಖಾಸಗಿ ಕ್ಲಿನಿಕ್​ ವೈದ್ಯರಾಗಿರೋ ಯಶೋಧರ್ ಪೂಜಾರಿ ವಿರುದ್ಧ ಈ ಹಿಂದೆಯೂ ಹಲವು ದೂರುಗಳಿವೆ. ಹಾಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ವಿನೋದ್ ಮೃತ ದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಅದರ ವರದಿ ಬಂದ ಬಳಿಕವಷ್ಟೇ ಸಾವಿಗೆ ನಿಖರ ಕಾರಣ ತಿಳಿಯಲಿದೆ.

    ಸಿಕ್ಸ್‌ಗಳನ್ನೇ ಬಾರಿಸಬೇಕಾದ 6 ಓವರ್‌ ಪಂದ್ಯದಲ್ಲಿ ಮುಖಾಮುಖಿಯಾದ ಭಾರತ vs ಪಾಕ್: ಗೆದ್ದವರಾರು?


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading