ಬೆಂಗಳೂರು: ನಗರದ ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತಿ ತನ್ನ ಪತ್ನಿಯ ಕುತ್ತಿಗೆ ಮೇಲೆ ಕಾಲಿಟ್ಟು ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹರೀಶ್ ಎಂಬಾತ ತನ್ನ ಪತ್ನಿ ಪದ್ಮಜಾಳ ಜತೆ ಜಗಳ ಮಾಡಿ ಕೋಪದಲ್ಲಿ ಆಕೆಯನ್ನು ನೆಲಕ್ಕೆ ಬೀಳಿಸಿ, ಬಳಿಕ ಕುತ್ತಿಗೆ ಮೇಲೆ ಕಾಲಿಟ್ಟು ದಾರುಣವಾಗಿ ಕೊಲೆ ಮಾಡಿದ್ದಾನೆ.
ಇನ್ನು ಇಬ್ಬರೂ ಕೋಲಾರದ ಶ್ರೀನಿವಾಸಪುರ ಮೂಲದವರಾಗಿದ್ದು, ಬಿಇ ಮಾಡಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಹರೀಶ್ ಕೆಲ ದಿನಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಇದ್ದು, ನಿನ್ನೆ ( ಜುಲೈ 8 ) ಪತ್ನಿ ಶಾಪಿಂಗ್ ಮುಗಿಸಿ ತಡವಾಗಿ ಮನೆಗೆ ಬಂದ ಕಾರಣ ಜಗಳ ತೆಗೆದಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ದುರಂತ ಸಂಭವಿಸಿದೆ.
ಸ್ಥಳೀಯರು ಇಬ್ಬರ ನಡುವೆ ಆಗಾಗ ಜಗಳಗಳು ನಡೆಯುತ್ತಲೇ ಇದ್ದವು ಎಂದು ಹೇಳಲಾಗಿದ್ದು, ಬೊಮ್ಮನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
ರಾಜ್ಯಕ್ಕೆ ತಟ್ಟದ ಭಾರತ್ ಬಂದ್ ಬಿಸಿ; ಬ್ಯಾಂಕಿಂಗ್ ಸೇವೆ ಇದೆಯಾ, ಇಲ್ವಾ?
ಕೃಷಿ ಎಐ ಕನ್ನಡ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


