ಕೊಡಗು: ಸೋಮವಾರಪೇಟೆ ತಾಲೂಕಿನ ಗರ್ವಾಲೆಯಲ್ಲಿ ಬೃಹತ್ ಮರವೊಂದು ಅಂಗನವಾಡಿ ಕಟ್ಟಡದ ಮೇಲೆ ಬಿದ್ದಿದ್ದು, ಕಟ್ಟದ ಮೇಲ್ಛಾವಣಿ ಕುಸಿದುಬಿದ್ದಿದೆ.
ಇನ್ನು ಈ ಅವಘಡದಲ್ಲಿ ಅಂಗನವಾಡಿ ಸಹಾಯಕಿಗೆ ಗಂಭೀರ ಗಾಯಗಳಾಗಿದ್ದು, ಇಂದು ಅಂಗನವಾಡಿಗೆ ಹಾಜರಾಗಿದ್ದ ಎಲ್ಲ 14 ಮಕ್ಕಳೂ ಸಹ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಗ್ರಾಮ ಪಂಚಾಯಿತಿಯಲ್ಲಿ ವ್ಯಾಕ್ಸಿನ್ ತೆಗೆದುಕೊಳ್ಳುವುದಕ್ಕಾಗಿ 14 ಮಕ್ಕಳು ತೆರಳಿದ್ದ ವೇಳೆ ಮರ ಕಟ್ಟಡದ ಮೇಲೆ ಕುಸಿದು ಬಿದ್ದದ್ದರಿಂದ ಮಕ್ಕಳ ಜೀವ ಉಳಿದಿದೆ.
ಈ ಅವಘಡ ಸಂಭವಿಸುತ್ತಿದ್ದಂತೆ ಸ್ಥಳೀಯರು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದು, ಅಪಾಯಕಾರಿ ಮರವನ್ನು ತೆರವು ಮಾಡಿ ಎಂದು ಮನವಿ ಮಾಡಿಕೊಂಡರೂ ತೆರವು ಮಾಡದೇ ನಿರ್ಲಕ್ಷ್ಯ ಮಾಡಿದರು ಎಂದು ಆರೋಪಿಸಿದ್ದಾರೆ.
ಕೆಆರ್ಎಸ್ ಹಿನ್ನೀರಿನಲ್ಲಿ ಅನೈತಿಕ ಚಟುವಟಿಕೆ ವರದಿ ಬೆನ್ನಲ್ಲೇ ಕಿಡಿಗೇಡಿಗಳನ್ನು ಬಂಧಿಸಿದ ಪೊಲೀಸರು
ಕನ್ನಡ ಕೃಷಿ ಎಐ ವೆಬ್ಸೈಟ್ಗಾಗಿ ಇಲ್ಲಿ ಕ್ಲಿಕ್ ಮಾಡಿ
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


