ಹನೂರು: ಜಮೀನಿನ ಅರಿಶಿನ ಬೆಳೆಯ ಮಧ್ಯಭಾಗದಲ್ಲಿ ಬೆಳದಿದ್ದ ಒಂದು ಗಾಂಜಾ ಗಿಡವನ್ನು ಬೆಳೆದಿದ್ದ ಆರೋಪಿಯನ್ನು ಬಂಧಿಸಿರುವ ಹನೂರು ಪೊಲೀಸರು ಮಾಲನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹನೂರು ತಾಲೂಕಿನ ಶಿರಗೋಡು ಗ್ರಾಮದ ರಾಮಸ್ವಾಮಿ ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ಹನೂರು ತಾಲೂಕಿನ ಲೊಕ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿರಗೋಡು ಗ್ರಾಮದ ರಾಮಸ್ವಾಮಿ ಎಂಬುವರು ಜಮೀನಿನ ಬೆಳೆಯ ಮಧ್ಯ ಗಾಂಜಾ ಗಿಡ ಬೆಳೆದಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ಪ್ರಸಾದ್ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಹಾಗೂ ಇನ್ಸ್ಪೆಕ್ಟರ್ ಶಶಿಕುಮಾರ್ ರವರ ಮಾರ್ಗದರ್ಶನದಲ್ಲಿ ದಾಳಿ ನಡೆಸಿ 250 ಗ್ರಾಂ ತೂಕದ 2.5 ಸಾವಿರ ಬೆಲೆಬಾಳುವಗಾಂಜಾ ಗಿಡವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


