Wednesday, September 2, 2026
spot_img
More
    spot_img
    HomeLatest newsಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

    ಆರ್‌ಬಿಐ ನೂತನ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ನೇಮಕ

    ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    Advertisement

    ಪ್ರಸ್ತುತ ಗವರ್ನರ್‌ ಆಗಿರುವ ಶಕ್ತಿಕಾಂತ್‌ ದಾಸ್‌ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.11ರಂದು ಸಂಜಯ್‌ ಮಲ್ಹೋತ್ರಾ ಅವರು, ಆರ್‌ಬಿಐ ನೂತನ ಗವರ್ನರ್‌ ಆಗಿ ತಮ್ಮ ಕಾರ್ಯ ಆರಂಭಿಸಲಿದ್ದಾರೆ. ಮೂರು ವರ್ಷಗಳ ಕಾಲ ಅವರು ಅಧಿಕಾರದಲ್ಲಿರುತ್ತಾರೆ.

    ಸಂಜಯ್‌ ಮಲ್ಹೋತ್ರಾ ಅವರು ರಾಜಸ್ಥಾನದ ಕೇಡರ್‌ನ 1990ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿದ್ದಾರೆ. ಐಐಟಿ ಕಾನ್ಪುರ್‌ನಲ್ಲಿ ಕಂಪ್ಯೂಟರ್‌ ಸೈನ್ಸ್‌ ಎಂಜಿನಿಯರಿಂಗ್‌ ಮಾಡಿದ್ದು, ಅಮೇರಿಕಾದ ಪ್ರಿನ್ಸ್‌ಟನ್‌ ಯೂನಿವರ್ಸಿಟಿಯ ಆಫ್‌ ಪಬ್ಲಿಕ್‌ನಲ್ಲಿ ಸ್ನಾತಕೋತ್ತರ ವ್ಯಾಸಂಗ ಮುಗಿಸಿದ್ದಾರೆ.

    ಈ ಹಿಂದೆ ಸರ್ಕಾರಿ ಸ್ವಾಮ್ಯದ ಆರ್‌ಇಸಿ ಛೇರ್ಮನ್‌ ಆಗಿ ಕಾರ್ಯ ನಿರ್ವಹಿಸಿದ್ದು, ಜಿಎಸ್‌ಟಿ ಮಂಡಳಿಯಲ್ಲೂ ಕೆಲಸ ಮಾಡಿದ್ದಾರೆ. ಇವರಿಗೆ ವಿದ್ಯುತ್‌, ತೆರಿಗೆ, ಹಣಕಾಸು, ಐಟಿ, ಗಣಿಗಳಲ್ಲಿ ಕೆಲಸ ಮಾಡಿದ ಅನುಭವವಿದೆ. ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವೆನ್ಯೂ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ವಿದ್ಯುತ್‌ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದ ಸಂಜಯ್‌ ಮಲ್ಹೋತ್ರಾ, ವಿದ್ಯುತ್‌ ವಿತರಣೆಯಲ್ಲಿ 3 ಲಕ್ಷಕ್ಕೂ ಅಧಿಕ ಮೊತ್ತದ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿದ್ದರು. ತೆರಿಗೆ, ಪಬ್ಲಿಕ್‌ ಫೈನಾನ್ಸ್‌, ಇಂಧನ ವಲಯದ ಸುಧಾರಣೆ, ಆರ್ಥಿಕ ಆಡಳಿತದ ವಿಚಾರಗಳಲ್ಲಿ ಅವರಿಗೆ ತುಂಬಾ ಅನುಭವವಿದೆ.

    ಈ ಹಿನ್ನಲೆಯಲ್ಲಿ ಡಿಸೆಂಬರ್‌.11ರಂದು ಸಂಜಯ್‌ ಮಲ್ಹೋತ್ರಾ ಅವರು, ಆರ್‌ಬಿಐ ನೂತನ ಗವರ್ನರ್‌ ಆಗಿ ತಮ್ಮ ಸೇವೆ ಸಲ್ಲಿಸಲಿದ್ದಾರೆ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading