Saturday, August 8, 2026
spot_img
More
    spot_img
    HomeTop Storyಪದ್ಮ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭ

    ಪದ್ಮ ಪುರಸ್ಕಾರಕ್ಕೆ ಆನ್‌ಲೈನ್‌ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭ

    ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪುರಸ್ಕಾರಕ್ಕೆ ಆನ್‍ಲೈನ್‍ನಲ್ಲಿ ನಾಮನಿರ್ದೇಶನ ಪ್ರಕ್ರಿಯೆ ಪ್ರಾರಂಭವಾಗಿದೆ.

    Advertisement

    ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲು ಕೊನೆಯ ದಿನಾಂಕ ಜುಲೈ 31 ಆಗಿರುತ್ತದೆ.ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಪದ್ಮ ಪ್ರಶಸ್ತಿಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.

    ಪುರಸ್ಕಾರಕ್ಕೆ ಜುಲೈ 31ರವರೆಗೆ ನಾಮನಿರ್ದೇಶನಗಳನ್ನು ಮಾಡಬಹುದು. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ರಾಷ್ಟ್ರೀಯ ಪ್ರಶಸ್ತಿ ಪೋರ್ಟಲ್‍ನಲ್ಲಿ ಮಾತ್ರ ಆನ್‍ಲೈನ್‍ನಲ್ಲಿ ಸ್ವೀಕರಿಸಲಾಗುತ್ತದೆ.

    ಪದ್ಮ ಪ್ರಶಸ್ತಿಗಳಿಗೆ ಅರ್ಜಿಗಳನ್ನು ಈ ವೆಬ್‍ಸೈಟ್‍ಗೆ ಭೇಟಿ ನೀಡುವ ಮೂಲಕ ಸಲ್ಲಿಸಬಹುದು. ಒಬ್ಬ ವ್ಯಕ್ತಿಯನ್ನು ಆನ್‍ಲೈನ್‍ನಲ್ಲಿ ಶಿಫಾರಸು ಮಾಡುವಾಗ, ಅಗತ್ಯವಿರುವ ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಬೇಕು.

    1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ವಿಶಿಷ್ಟ ಕಾರ್ಯವನ್ನು ಗುರುತಿಸಲು ಪ್ರಯತ್ನಿಸುತ್ತದೆ ಮತ್ತು ಕಲೆ, ಸಾಹಿತ್ಯ ಮತ್ತು ಶಿಕ್ಷಣ, ಕ್ರೀಡೆ, ವೈದ್ಯಕೀಯ, ಸಮಾಜ ಕಾರ್ಯ, ವಿಜ್ಞಾನ ಮತ್ತು ಎಂಜಿನಿಯರಿಂಗ್, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು, ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು, ಸೇವೆಗಾಗಿ ನೀಡಲಾಗುತ್ತದೆ.

    ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗದ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ಈ ಹಿಂದೆ ಪ್ರಶಸ್ತಿ ಪಡೆದ ವ್ಯಕ್ತಿಗೆ ಸಂಬಂಧಿಸಿದಂತೆ ಪದ್ಮ ಪ್ರಶಸ್ತಿಯ ಉನ್ನತ ವರ್ಗವನ್ನು ಪರಿಗಣಿಸಬಹುದು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ, ಪಿಎಸ್‍ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.


    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe to get the latest posts sent to your email.

    Leave a Reply

    Related News

    ಎಸ್‌ಐಆರ್ ಅಕ್ರಮ: ಎನ್‌ಡಿಎ ನಿಯೋಗ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು

    ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ದುರುಪಯೋಗದ ಆರೋಪದೊಂದಿಗೆ ಕುಮಾರಸ್ವಾಮಿ ಮತ್ತು ಪ್ರಲ್ಹಾದ ಜೋಶಿ ನೇತೃತ್ವದ ಎನ್‌ಡಿಎ ನಿಯೋಗ ನವದೆಹಲಿಯಲ್ಲಿ ಮುಖ್ಯ ಚುನಾವಣಾ ಆಯುಕ್ತರಿಗೆ ದಾಖಲೆ ಸಮೇತ ದೂರು ಸಲ್ಲಿಸಿತು.

    ಮಾದಪಟ್ಟಣ ಕ್ವಾರಿ ದುರಂತ: ಅಶೋಕ ತಲಾ ₹50 ಲಕ್ಷ ಪರಿಹಾರ ಆಗ್ರಹ

    ಬೆಂಗಳೂರು ಮಾದಪಟ್ಟಣ ಕ್ವಾರಿಯಲ್ಲಿ ಬಂಡೆ ಬಿದ್ದು 7 ಕಾರ್ಮಿಕರು ಮೃತಪಟ್ಟ ಘಟನೆಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ನಿರ್ಲಕ್ಷ್ಯವೇ ಕಾರಣ ಎಂದು ದೂರಿ ತಲಾ ₹50 ಲಕ್ಷ ಪರಿಹಾರ ಒತ್ತಾಯಿಸಿದ್ದಾರೆ.

    Most Popular

    Recent Comments

    Home
    Play
    Notification
    Search

    Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ

    Subscribe now to keep reading and get access to the full archive.

    Continue reading