ಕೆಂಗೇರಿ: ಎರಡು ಮಕ್ಕಳ ತಾಯಿಯ ಮೇಲಿನ ಹುಚ್ಚು ಪ್ರೀತಿಗೆ ಪಾಗಲ್ ಪ್ರೇಮಿಯೊಬ್ಬ ಬರ್ಬರ ಹತ್ಯೆ ನಡೆಸಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ.
25 ವರ್ಷದ ಇಂಜಿನಿಯರ್ ಯಶಸ್ ಕೊಲೆ ಆರೋಪಿಯಾಗಿದ್ದು, 33 ವರ್ಷದ ಹರಿಣಿ ಮೃತ ಮಹಿಳೆ. ಇಬ್ಬರೂ ಸಹ ಕೆಂಗೇರಿ ನಿವಾಸಿಗಳಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ಯಶಸ್ ಸ್ನೇಹಿತರ ಸಂಬಂಧಿಯಾಗಿರುವ ಹರಿಣಿ ಜಾತ್ರೆಯೊಂದರಲ್ಲಿ ಯಶಸ್ಗೆ ಪರಿಚಯವಾಗಿ ನಂಬರ್ ಬದಲಿಸಿಕೊಂಡಿದ್ದರು.
ಹೀಗೆ ಶುರುವಾದ ಸ್ನೇಹ ಕಾಮಕ್ಕೆ ತಿರುಗಿ ಇಬ್ಬರೂ ಆಗಾಗ ಭೇಟಿಯಾಗುತ್ತಿದ್ದರು. ಇತ್ತ ಯಶಸ್ ಹರಿಣಿಯ ಮೇಲೆ ವ್ಯಾಮೋಹ ಬೆಳೆಸಿಕೊಂಡಿದ್ದ. ಇಬ್ಬರ ನಡುವೆ ಜಗಳ ನಡೆದಿದ್ದು, ಮಾತನಾಡುವ ಸಲುವಾಗಿ ಸ್ಥಳೀಯ ಓಯೊ ರೂಮಿಗೆ ಕರೆಸಿಕೊಂಡಿದ್ದ. ಬಳಿಕ ಲೈಂಗಿಕ ಕ್ರಿಯೆ ನಡೆಸಿ ಆಕೆಗೆ ನೀನು ನನಗೆ ಸಿಗದ ಮೇಲೆ ಇನ್ಯಾರಿಗೂ ಸಿಗಬಾರದು ಎಂದು ಹೇಳಿ ಆಕೆಯನ್ನು ಹತ್ಯೆಗೈದಿದ್ದಾನೆ.
ಹರಿಣಿಯನ್ನು ಕೊಲ್ಲಲೆಂದೇ ಚಾಕು ಖರೀದಿಸಿದ್ದ ಯಶಸ್ 17 ಬಾರಿ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಈ ಮೂಲಕ ಚೆನ್ನಾಗಿ ನೋಡಿಕೊಳ್ಳುತ್ತಿದ್ದ ಪತಿ ಹಾಗೂ ಇಬ್ಬರು ಮಕ್ಕಳನ್ನು ಬಿಟ್ಟು ಮಾಡಿದ ಕೆಟ್ಟ ಸಂಬಂಧಕ್ಕೆ ಹರಿಣಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾಳೆ.
Discover more from ಕರುನಾಡ ಸುದ್ದಿ - ಅತ್ಯುತ್ತಮ ಕನ್ನಡ ಸುದ್ದಿಗಳಿಗಾಗಿ
Subscribe to get the latest posts sent to your email.


